ಹೊನ್ನಾವರ:- ದಿನಾಂಕ 20-01-2022 ಗುರುವಾರ ಎಸ್.ಡಿ.ಎಂ. ಪದವಿ ಕಾಲೇಜಿನ ಪ್ಲೇಸ್ಮೆಂಟ್ ಸೆಲ್ನ ಆಶ್ರಯದಲ್ಲಿ ಐ.ಸಿ.ಐ.ಸಿ.ಐ. ಬ್ಯಾಂಕ್ ವತಿಯಿಂದ ರಿಲೇಶನ್ಶಿಪ್ ಆಫೀಸರ್ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿತ್ತು.
ಬೆಂಗಳೂರಿನಿAದ ಆಗಮಿಸಿದ ಎಚ್.ಆರ್.ಮ್ಯಾನೇಜರ್ ಕಿರಣರವರು ಜಿಲ್ಲೆಯ ವಿವಿಧ ತಾಲೂಕುಗಳಿಂದ ಆಗಮಿಸಿದ 55 ಪದವಿಧರರಿಗೆ ಸಂದರ್ಶನ ನಡೆಸಿ 30 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದರು ಮತ್ತು ಜನವರಿ 25 ರಿಂದ ಸೇವೆಗೆ ಸೇರುವಂತೆ ಕೇಳಿಕೊಂಡರು.
ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದ ಸಂಸ್ಥೆಯ ಅಧ್ಯಕ್ಷ ಕೃಷ್ಣಮೂರ್ತಿ ಭಟ್ಟ, ಮುಂದಿನ ದಿನಗಳಲ್ಲಿ ನಮ್ಮ ಮಹಾವಿದ್ಯಾಲಯದಲ್ಲಿ ಉದ್ಯೋಗದ ತರಬೇತಿಗಳನ್ನು ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ನುಡಿದರು. ಅಧ್ಯಕ್ಷತೆ ವಹಿಸಿದ ಪ್ರಾಚಾರ್ಯ ಡಾ. ವಿಜಯಲಕ್ಷಿö್ಮ ನಾಯ್ಕ ಉದ್ಯೋಗಾಕಾಂಕ್ಷಿಗಳಿಗೆ ಶುಭ ಕೋರಿದರು. ಕಾಲೇಜಿನ ಪ್ಲೇಸ್ಮೆಂಟ್ ಆಫೀಸರ್ ಡಾ. ಡಿ. ಎಲ್. ಹೆಬ್ಬಾರ ಪ್ರಾಸ್ಥಾವಿಕ ನುಡಿಗಳೊಂದಿಗೆ ಸ್ವಾಗಿತಿಸಿದರು. ಐ.ಕ್ಯೂ.ಎ.ಸಿ. ಸಂಚಾಲಕರು ಡಾ. ಪಿ. ಎಂ. ಹೊನ್ನಾವರ ವಂದಿಸಿದರು. ಸಂಗೀತ ವಿಭಾಗದ ಗಾನಾ ಭಂಡಾರಿ ಮತ್ತು ಭಾಗ್ಯಶ್ರೀ ಪ್ರಾರ್ಥಿಸಿದರು. ಪ್ರೊ. ಎಚ್.ಟಿ.ರ್ವಾರೆ ನಿರೂಪಿಸಿದರು.
More Stories
ಸಾನ್ವಿ ರಾವ್ ಹೊನ್ನಾವರ, ದ್ವೀತಿಯ ಪಿಯುಸಿ ಕಾಮರ್ಸ ನಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ. :
ಬಿಜೆಪಿ ಜಿಲ್ಲೆಯಲ್ಲಷ್ಟೇ ಅಲ್ಲ, ರಾಜ್ಯದಲ್ಲೂ ಏನೂ ಮಾಡಿಲ್ಲ: ಮಂಕಾಳ ವೈದ್ಯ ಟೀಕೆ
ಬಿಜೆಪಿ ಬಿಜೆಪಿ ಎಂದು ಕುಣಿಯುವ ಯುವಕರಿಗೆ ಮತದಾನದ ಹಕ್ಕು ನೀಡಿದ್ದು ಕಾಂಗ್ರೆಸ್: ದೇಶಪಾಂಡೆ