April 27, 2024

Bhavana Tv

Its Your Channel

 ಫ್ಲೈ ಓವರ್ ನಿರ್ಮಾಣದ ವಿಳಂಬಕ್ಕೆ ಹಿಂದಿನ ಕಾಂಗ್ರೆಸ್ ಪಕ್ಷವೇ ಕಾರಣ – ಶಾಸಕ ದಿನಕರ ಶೆಟ್ಟಿ

ಹೊನ್ನಾವರ ಪಟ್ಟಣದಲ್ಲಿ ಹಾದು ಹೋಗುವ ಪ್ಲ್ಯಾಯ್ ಓವರ ನಿರ್ಮಾಣದ ವಿಳಂಬಕ್ಕೆ ಹಿಂದಿನ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಕುಮಟಾ ಹೊನ್ನಾವರ ಶಾಸಕ ದಿನಕರ ಶೆಟ್ಟಿಯವರು ಆರೋಪ ವ್ಯಕ್ತಪಡಿಸಿದರು.

ಅವರು ಮಂಗಳವಾರ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಹೊನ್ನಾವರದಲ್ಲಿ ವಾಹನಗಳ ಓಡಾಟ ಹೆಚ್ಚಿರುವುದರಿಂದ ಪ್ಲೈ ಓವರ್ ಅವಶ್ಯಕತೆ ಇದೆ. ಅದನ್ನು ಹಿಂದಿನ ಸರ್ಕಾರ ಮನಗೊಂಡು ಯೋಜನೆ ರೂಪಿಸಬೇಕಿತ್ತು. ತಾನು ಈ ಬಗ್ಗೆ ಪ್ರಯತ್ನಿಸುತ್ತಿದ್ದು ಸಂಸದ ಅನಂತಕುಮಾರ ಹೆಗಡೆಯವರು ಮಾಡುವ ಭರವಸೆ ವ್ಯಕ್ತಪಡಿಸಿದ್ದಾರೆ ಎಂದರು. ಹೊನ್ನಾವರ ಪಟ್ಟಣದ ಎಲ್ಲಾ ರಸ್ತೆಗಳ ಅಭಿವೃದ್ಧಿಗೆ ಪ್ರಯತ್ನ ಮಾಡಲಾಗಿದೆ. ನೂತನ ಬಸ್ ನಿಲ್ದಾಣ , ಕುಡಿಯುವ ನೀರು,ಓಳ ಚರಂಡಿ ವ್ಯವಸ್ಥೆ ಸೇರಿದಂತೆ ಎ ಆರ್ ಟಿ ಓ ಕಛೇರಿಗೂ ಭೂಮಿ ಮಂಜೂರು ಮಾಡಲಾಗಿದೆ ಎಂದು ವಿವರ ನೀಡಿದರು.
ಹೊನ್ನಾವರ ತಾಲ್ಲೂಕಿನ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. ಇನ್ನೂ ಹೆಚ್ಚಿನ ಕೆಲಸ ಮಾಡಬೇಕಿದ್ದು ಜನತೆಯ ಸಹಕಾರ ಕೋರಿದರು.

ಉ.ಕ ಜಿಲ್ಲೆಯ ಮೀನುಗಾರರ ಮಹಿಳೆಯರಿಗೆ ಸಾಲಮನ್ನಾದಲ್ಲಿ ಅನ್ಯಾಯವಾಗಿದೆ ಎಂಬ ಪ್ರಶ್ನೆ ಗೆ ಉತ್ತರಿಸಿದ ಅವರು ಪ್ರಥಮ ಬಾರಿಗೆ ಸಾಲಮನ್ನಾದ ಬಗ್ಗೆ ವಿಧಾನ ಸೌಧದಲ್ಲಿ ನಾನೇ ಮುಖ್ಯಮಂತ್ರಿಗಳಿ ಪ್ರಸ್ತಾವನೆ ಸಲ್ಲಿಸಿದ್ದೆ. ಆದರೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯವರು ಹೆಚ್ಚಿನ ಲಾಭ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಮಹಿಳೆಯರು ಸಾಲ ಮರು ಪಾವತಿಸಲು ಸಾಧ್ಯವಾಗದೆ ಸಂಕಷ್ಟದಲ್ಲಿರುವುದು ನನ್ನ ಗಮನಕ್ಕೆ ಬಂದಿದೆ ಈ ಬಗ್ಗೆ ಮುಖ್ಯಮಂತ್ರಿಗಳ ಬಳಿ ಚರ್ಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಶಿವರಾಜ ಮೇಸ್ತ, ಉಪಾಧ್ಯಕ್ಷೆ ಮೇಧಾ ನಾಯ್ಕ, ಸದಸ್ಯರಾದ ಮಹೇಶ ಮೇಸ್ತ, ಮುಖಂಡರಾದ ರಘು ಪೈ,ಶ್ರೀಕಾಂತ್ ಮೋಗೇರ್ ಮುಂತಾದವರು ಉಪಸ್ಥಿತರಿದ್ದರು.
ವರದಿ: ವೆಂಕಟೇಶ ಮೇಸ್ತ ಹೊನ್ನಾವರ

error: