May 19, 2024

Bhavana Tv

Its Your Channel

ಹುಮನಾಬಾದ ತಹಶೀಲ್ದಾರರ ಮೇಲಿನ ಹಲ್ಲೆ ಖಂಡಿಸಿ ತಹಶೀಲ್ದಾರ ನಾಗರಾಜ ನಾಯ್ಕಡರಿಗೆ ಮನವಿ

ಹೊನ್ನಾವರ: ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ತಹಶೀಲ್ದಾರಾದ ಪ್ರದೀಪ ಹಿರೇಮಠ ಇವರ ಮೇಲೆ ಕತ9ವ್ಯದ ಸಮಯದಲ್ಲಿ ಕೆಲವೊಂದು ರಾಜಕೀಯ ಪ್ರೇರಿತ ವ್ಯಕ್ತಿಗಳಿಂದ ಹಲ್ಲೆ ಮಾಡಿದ್ದು ವಿಷಾದನೀಯವಾಗಿದೆ.ಇಂತವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ತಾಲೂಕಿನ ಸಮಸ್ತ ನೌಕರರ ಪರವಾಗಿ ಹೊನ್ನಾವರ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ರಾಜಕುಮಾರ ಟಿ ನಾಯ್ಕ ಇವರ ಅಧ್ಯಕ್ಷತೆಯಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ವೃಂದ ಸಂಘದ ಅಧ್ಯಕ್ಷರು ಹಾಗೂ ಪಧಾದಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ತಾಲೂಕಿನ ನೌಕರರು ಭಾಗವಹಿಸಿ ಹೊನ್ನಾವರ ತಹಶೀಲ್ದಾರ ನಾಗರಾಜ ನಾಯ್ಕಡ ಇವರ ಮುಖಾಂತರ ಸರಕಾರಕ್ಕೆ ಮನವಿಯನ್ನು ಸಲ್ಲಿಸಲಾಯಿತು.

error: