ಹೊನ್ನಾವರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ಶುಕ್ರವಾರ ಹೊನ್ನಾವರ ಪ್ರಭಾತನಗರ ಅಂಗನವಾಡಿಯಲ್ಲಿ ನಡೆಯಿತು.
ಗರ್ಭಿಣಿಯರು ಮತ್ತು ಮಕ್ಕಳಿಗೆ ಆರೋಗ್ಯಕ್ಕೆ ಸಹಕಾರಿಯಾದ ಆಹಾರವನ್ನು ಒದಗಿಸಿ ಮಾಹಿತಿ ನೀಡಲಾಯಿತು.
ಪಟ್ಟಣ ಪಂಚಾಯತಿ ಉಪಾಧ್ಯಕ್ಷೆ ಮೇಧಾ ನಾಯ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಸರ್ಕಾರ ಸಿರಿಧಾನ್ಯ ಸೇರಿದಂತೆ ಪೌಷ್ಠಿಕಾಂಶಯುಕ್ತ ಆಹಾರವನ್ನು ಒದಗಿಸುತ್ತಿದೆ. ಪಾಲಕರು ತಾತ್ಸಾರ ಮಾಡದೇ ಮುಖ್ಯ ಆಹಾರವನ್ನು ನೀಡಿ ಮಕ್ಕಳ ಬೆಳವಣಿಗೆಗೆ ಸಹಕರಿಸಬೇಕು. ಪ್ರಭಾತನಗರ ಅಂಗನವಾಡಿಯು ಮಕ್ಕಳ ಅಭಿವೃದ್ಧಿಗೆ ಶ್ರಮಿಸುವಲ್ಲಿ ಮುಂಚೂಣಿಯಲ್ಲಿದೆ. ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ಗರ್ಭಿಣಿ ನೇತ್ರಾವತಿ ಮೇಸ್ತ ಅವರಿಗೆ ಸೀಮಂತ ಕಾರ್ಯಕ್ರಮ ನಡೆಸಲಾಯಿತು. ಬಾಲಕಿ ವಿಸ್ಮಯಾ ಇವಳಿಗೆ ಅನ್ನಪ್ರಾಶನ ನಡೆಸಲಾಯಿತು. ಬಾಲಕಿ ಅಲ್ಪಿಯಾ ಫರ್ನಾಂಡಿಸ್ಳ ಹುಟ್ಟುಹಬ್ಬ ಆಚರಿಸಲಾಯಿತು.
ತಾಲೂಕು ಮಹಿಳಾ ಮೋರ್ಚಾ ಅಧ್ಯಕ್ಷೆ ಶಾರದಾ ನಾಯ್ಕ, ಮಕ್ಕಳು, ಪಾಲಕರು ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ನೇತ್ರಾವತಿ ನಾಯ್ಕ, ಸಹಾಯಕಿ ನೇತ್ರಾವತಿ ಹರಿಜನ ನಿರ್ವಹಿಸಿದರು.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ