May 16, 2024

Bhavana Tv

Its Your Channel

“ಹಸಿರು ಚಾಂಪಿಯನ್” ಆಗಿ ಎಸ್.ಡಿ.ಎಮ್ ಆಯ್ಕೆ.

ಹೊನ್ನಾವರದ ಪ್ರತಿಷ್ಠಿತ ಎಮ್.ಪಿ.ಇ ಸೊಸೈಟಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾ, ವಿಜ್ಞಾನ, ವಾಣಿಜ್ಯ ಮಹಾವಿದ್ಯಾಲಯಕ್ಕೆ ಭಾರತ ಸರಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಶಿಕ್ಷಣ ಪರಿಷತ್, ಉನ್ನತ ಶಿಕ್ಷಣ ವಿಭಾಗ, ಶಿಕ್ಷಣ ಮಂತ್ರಾಲಯ ಇವರು 2021-22 ನೇ ಶೈಕ್ಷಣಿಕ ಸಾಲಿನ “ಉತ್ತರ ಕನ್ನಡ ಜಿಲ್ಲೆಯ ಹಸಿರು ಚಾಂಪಿಯನ್” ಎಂದು ಆಯ್ಕೆ ಮಾಡಿರುತ್ತಾರೆ. ಈ ಪ್ರಶಸ್ತಿಯು ಪ್ರಶಸ್ತಿ ಪತ್ರ ಹಾಗೂ ನಗದು 5000 ವನ್ನು ಒಳಗೊಂಡಿದೆ.
ಮಹಾವಿದ್ಯಾಲಯದಲ್ಲಿ ಅಳವಡಿಸಿರುವ ಹಸಿರು ಯೋಜನೆಗಳು ಹಾಗೂ ಅದರ ನಿರ್ವಹಣೆಯಲ್ಲಿ ತೋರಿರುವ ಗಮನಾರ್ಹ ಸಾಧನೆಯನ್ನು ಗಮನಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿ ವೃಂದದವರು ಹರ್ಷ ವ್ಯಕ್ತಪಡಿಸಿದ್ದಾರೆ.

error: