ಹೊನ್ನಾವರ ಪಟ್ಟಣದ ಪ್ರಭಾತನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಂಗ್ಲ ಮಾಧ್ಯಮ ತರಗತಿ ಹಾಗೂ ಪೀಠೋಪಕರಣ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ದಿನಕರ ಶೆಟ್ಟಿ ಮಾತನಾಡಿ ಶಾಲಾಭಿವೃದ್ದಿ ಸಮಿತಿಯ ಕ್ರೀಯಾಶೀಲತೆಯಿಂದ ಪ್ರಭಾತನಗರದ ಸರ್ಕಾರಿ ಶಾಲೆಯು ಅಭಿವೃದ್ಧಿಯಲ್ಲಿ ಮುನ್ನುಗ್ಗುತ್ತಿದೆ. ದಾನಿಗಳ ಸಹಕಾರದಿಂದ ವಿದ್ಯಾರ್ಥಿಗಳು ವ್ಯವಸ್ಥಿತವಾಗಿ ಶಿಕ್ಷಣ ಪಡೆಯುವಂತಾಗಿದೆ. ಉತ್ತಮ ಶಿಕ್ಷಣದಿಂದ ವಿದ್ಯಾರ್ಥಿಗಳು ತೇಜಸ್ಸು ಹೊಂದಿದ್ದಾರೆ. ಭವಿಷ್ಯದಲ್ಲಿ ಉನ್ನತ ಸ್ಥಾನಕ್ಕೆ ಏರಲಿದ್ದಾರೆ ಎಂದರು.
ಬೆAಗಳೂರಿನ ಔಮಾ ಇಂಡಿಯಾ ಸಂಸ್ಥೆಯಿAದ ಶಾಲೆಗೆ ಪೀಠೋಪಕರಣ ಒದಗಿಸಲು ನೆರವಾದ ಸಮಾಜ ಸೇವಕ ರಾಜು ಭಂಡಾರಿ ಅವರನ್ನು ಸನ್ಮಾನಿಸಲಾಯಿತು.
ಪ.ಪಂ. ಅಧ್ಯಕ್ಷ ಶಿವರಾಜ ಮೇಸ್ತ, ಸದಸ್ಯರಾದ ಮೇಧಾ ನಾಯ್ಕ, ವಿಜಯ ಕಾಮತ, ನಾಗರಾಜ ಭಟ್, ದತ್ತಾತ್ರಯ ಮೇಸ್ತ, ಎಸ್.ಡಿ.ಎಂ.ಸಿ ಅಧ್ಯಕ್ಷ ಮಾರುತಿ ನಾಯ್ಕ, ಉಪಾಧ್ಯಕ್ಷ ಕೇಶವ ತಾಂಡೇಲ, ವಿದ್ಯಾರ್ಥಿ ಪಾಲಕರು ಉಪಸ್ಥಿತರಿದ್ದರು.
ಮುಖ್ಯಾಧ್ಯಾಪಕಿ ವೀಣಾ ಶಾನಭಾಗ ಸ್ವಾಗತಿಸಿ ಪ್ರಾಸ್ತಾವಿಕ ಮಾತನಾಡಿದರು. ಸಹಶಿಕ್ಷಕಿ ವಿಜಯಾ ಶೇಟ್ ಧನ್ಯವಾದ ಸಮರ್ಪಿಸಿದರು. ಸುನೀತಾ ಮೇಸ್ತ, ಸಾವಿತ್ರಿ ಭಟ್ ನಿರ್ವಹಿಸಿದರು.
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು