May 17, 2024

Bhavana Tv

Its Your Channel

ಉಪ್ಪೋಣಿಯ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೌರ್ಣಮಿಯ ನಿಮಿತ್ತ ಸಾಮೂಹಿಕ ಸತ್ಯನಾರಾಯಣ ಪೂಜೆ

ಹೊನ್ನಾವರ: ತನ್ನ ಮಹಿಮೆಯಿಂದ ಅಪಾರ ಭಕ್ತರನ್ನು ಹೊಂದಿರುವ ಹೊನ್ನಾವರ ತಾಲ್ಲೂಕಿನ ಉಪ್ಪೋಣಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೌರ್ಣಮಿಯ ನಿಮಿತ್ತ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

 ರಾಜ್ಯ ಕಾಸ್ಕಾರ್ಡ ಬ್ಯಾಂಕ್‌ನ್ ಮಾಜಿ ಉಪಾಧ್ಯಕ್ಷ ಸಮಾಜ ಸೇವಕ ಮುಡೇಶ್ವರದ ಈಶ್ವರ ನಾಯ್ಕರವರು ದೇವಸ್ಥಾನಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ  ದೇವಸ್ಥಾನದ ಪ್ರಧಾನ ಅರ್ಚಕ ರವಿ ನಾಯ್ಕ ಅವರನ್ನು ದೇವಸ್ಥಾನದ ಪರವಾಗಿ ಶಾಲು ಹೊದಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಭಾವನಾ ಟಿವಿ ಯೊಂದಿಗೆ ಮಾತನಾಡಿದ ಈಶ್ವರ ನಾಯ್ಕರವರು ದೇವಸ್ಥಾನದ ಕುರಿತು ತಮ್ಮ ಅನಿಸಿಕೆ ವ್ಯಕಪಡಿಸಿದರು.
ದೇವಸ್ಥಾನದ ಪ್ರಧಾನ ಅರ್ಚಕ ಶ್ರೀ ರವಿ ನಾಯ್ಕರವರು ಮಾತನಾಡಿ ದೇವಸ್ಥಾನದಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳ ಬಗ್ಗೆ ವಿವರಣೆ ನೀಡಿದರು.
ರಾಜ್ಯದಿಂದ ವಿವಿಧ ಭಕ್ತರು ಆಗಮಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದಲ್ಲಿ ಸಾಮೂಹಿಕ ಸತ್ಯ ನಾರಾಯಣ ವೃತ ಪೂಜೆ.ಮಹಾಪೂಜೆ ,ಅನ್ನದಾದ ವಿವಿಧ ಸೇವೆಗಳು ನಡೆದವು.

ವರದಿ: ವೆಂಕಟೇಶ ಮೇಸ್ತ ಹೊನ್ನಾವರ

error: