ಹೊನ್ನಾವರ: ಪಟ್ಡಣದ ಎನ್ ಎಮ್ ಎಸ್ ಶಾಲೆಯ ವಿದ್ಯಾರ್ಥಿಗಳಿಗೆ ಇಲ್ಲಿಯ ಲಯನ್ಸ್ ಕ್ಲಬ್ ವತಿಯಿಂದ ಉಚಿತವಾಗಿ ಬ್ಯಾಗಗಳನ್ನು ವಿತರಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಲಯನ್ಸ್ ಡಿಸ್ಟ್ರಿಕ್ಟ್ ಗವರ್ನರ್ ಜೆ.ಎಮ್ ಎಫ್ ಶ್ರೀ ಕಾಂತ ಮೊರೆಯವರು ಲಯನ್ಸ್ ಸಂಸ್ಥೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ.
ರಾಜೇಶ ಸಾಲೇಹಿತ್ತಲರವರು ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಿಸಲು ಸಂಪೂರ್ಣ ಪ್ರಾಯೋಜಕತ್ವ ವಹಿಸಿಕೊಂಡಿದ್ದು ಅಭಿನಂದನೆ ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷ ವಿನೋದ ನಾಯ್ಕ ಮಾವಿನಹೊಳೆಯವರು ವರ್ಷದುದ್ದಕ್ಕೂ ಹಮ್ಮಿಕೊಂಡ ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.
ವೇದಿಕೆಯಲ್ಲಿ ಲಯನ್ಸ್ ಕಾರ್ಯದರ್ಶಿ ಉದಯ ನಾಯ್ಕ,ಹಿರಿಯ ಸದಸ್ಯರಾದ ಎಸ್ ಜೆ ಖೈರನ್ , ಡಾ.ಸುರೇಶ್ ನಾಯ್ಕ, ಉಪಸ್ಥಿತರಿದ್ದರು. ಎನ್ ಎಮ್ ಎಸ್ ಶಾಲಾ ಮುಖ್ಯೋಪಾಧ್ಯಾಯರಾದ ಪ್ರೇಮಕಾಂತ ನಾಯ್ಕ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಯೋಕತ್ವ ನೀಡಿದ ಲಯನ್ ರಾಜೇಶ ಸಾಲೇಹಿತ್ತಲ್ಲರವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,