ಹೊನ್ನಾವರ:- ರಾಜ್ಯ ಹಾಗೂ ಹೊರ ಜಿಲ್ಲೆಗಳಲ್ಲಿ ಅತ್ಯಂತ ಪ್ರಸಿದ್ದಿಯನ್ನು ಪಡೆದಿರುವ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಬಳ್ಕೂರಿನ ನೀಲಗೋಡ ಶ್ರೀ ಯಕ್ಷಿ ಚೌಡೇಶ್ವರಿ ದೇವಸ್ಥಾನದಲ್ಲಿ ಅಮವಾಸ್ಯೆಯ ಪ್ರಯುಕ್ತ ನಡೆದ ತೀರ್ಥಸ್ನಾನದಲ್ಲಿ ಸಾವಿರಾರು ಭಕ್ತರು ದೇವಿಯ ದರ್ಶನ ಪಡೆದರು.
ಭಕ್ತರ ಸಂಕಷ್ಟಗಳನ್ನು ಪರಿಹರಿಸುವ ಜಗನ್ಮಾತೆಯ ಅಪ್ಪಣೆಯಂತೆ ಪ್ರತಿ ಅಮವಾಸ್ಯೆಯ ದಿನದಂದು ಸಾವಿರಾರು ಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಆರೋಗ್ಯ ಸಮಸ್ಯೆಗಳಿಗೆ ಹಾಗೂ ಇನ್ನೀತರ ಸಮಸ್ಯೆಗಳಿಗೆ ಸಂಭAದಿಸಿದAತೆ ಮಂಗಳವಾರ ಹಾಗೂ ಶುಕ್ರವಾರದ ವಿಶೇಷ ದರ್ಶನದಲ್ಲಿ ದೇವಿ ಸೂಚಿಸಿದ ಸೂಚನೆಯಂತೇ ಭಕ್ತರು ತೀರ್ಥರು ತೀರ್ಥ ಸ್ನಾನ ಮಾಡುತ್ತಾರೆ.
ಪ್ರಧಾನ ಅರ್ಚಕ ಮಾದೇವ ಸ್ವಾಮೀಯವರ ಮಾಗದರ್ಶನ ದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ.
ಅಮವಾಸ್ಯೆಯ ತೀರ್ಥ ಸ್ನಾನದಂದು ಭಕ್ತರಿಗಾಗಿ ವಿಶೇಷ ಪ್ರಾರ್ಥನೆಗಳು ನಡೆದವು. ಲೋಕ ಕಲ್ಯಾಣಾರ್ಥ ಚಂಡಿಹವನ ನಡೆಯಿತು. ಭಕ್ತರಿಂದ ಬಾಳೆಕೋನೆ ಸೇವೆ, ತುಪ್ಪದ ದೀಪದ ಸೇವೆ, ಹೂವಿನ ಅಲಂಕಾರ ಸೇವೆ ಹಾಗೂ ಅನ್ನದಾನದ ಸೇವೆಗಳು ನಡೆದವು. ಸಾವಿರಾರು ಭಕ್ತರು ಉರಿ ಬಿಸಿಲಿನಲ್ಲು ಸರದಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆದರು.
ಧಾರವಾಡದ ಭಕ್ತರಾದ ಮಂಜುನಾಥರವರು ಹಣ್ಣುಗಳಿಂದಲೇ ದೇವಿಯ ಅಲಂಕಾರ ಮಾಡಿಸಿದ್ದು ವಿಶೇಷವಾಗಿತ್ತು
ವರದಿ:-ವೆಂಕಟೇಶ ಮೇಸ್ತ ಹೊನ್ನಾವರ
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್