ಹೊನ್ನಾವರ :- ಜಿಲ್ಲಾ ಪಂಚಾಯತ್ ಉತ್ತರ ಕನ್ನಡ, ತಾಲೂಕು ಪಂಚಾಯತ್ ಹೊನ್ನಾವರ ಮತ್ತು ಸಂಜೀವಿನಿ ತಾಲೂಕು ಅಭಿಯಾನ ನಿರ್ವಹಣಾ ಘಟಕ ಸಹಯೋಗದಲ್ಲಿ ದಿನಾಂಕ ೦೨-೦೬-೨೦೨೨ ರಂದು ತಾಲೂಕು ಪಂಚಾಯತ್ ಸಭಾಭವನದಲ್ಲಿ ಆಯೋಜಿಸಿದ ಗ್ರಾಮೀಣ ಭಾಗದ ಯುವಕ-ಯುವತಿಯರ ಉದ್ಯೋಗವಕಾಶಕ್ಕಾಗಿ “ಆಪ್ತ ಸಮಾಲೋಚನೆ: ಕಾರ್ಯಕ್ರಮ ಉದ್ಘಾಟಿಸಿ ಉದ್ಯೋಗಾಕಾಂಕ್ಷಿಗಳಿಗೆ ಕರೆ ನೀಡಿದರು.
ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಯುವಕ-ಯುವತಿಯರಿಗೆ ಕೌಶಲ್ಯಾಧಾರಿತ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲು ಮ್ಯಾನ್ ಪವರ್ ರಾಣೆಬೆನ್ನೂರು ಮತ್ತು ಸಂವಿತ್ ಎಜುಕೇಶನ್ ಟ್ರಸ್ಟ್ (Manpower Ranebennuru and Samvit Education Trust) ಮಂಗಳೂರು ಸಂಸ್ಥೆಯ ಸಿಬ್ಬಂದಿಗಳಿAದ ವಿವಿಧ ಟ್ರೇಡ್ ಗಳಿಗೆ ಸಂಬAಧಿಸಿದAತೆ ಉದ್ಯೋಗಾಕಾಂಕ್ಷಿಗಳಲ್ಲಿ ಆಪ್ತಸಮಾಲೋಚನೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿದವರಲ್ಲಿ ಇಪ್ಪತ್ತಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ಸಂಸ್ಥೆಯೊAದಿಗೆ ವಿವಿಧ ಟ್ರೇಡ್ ಗಳಿಗೆ ಸಂಬAಧಿಸಿದAತೆ ನೋಂದಣಿ ಮಾಡಿಸಿಕೊಂಡರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕರಾದ ಕೃಷ್ಣಾನಂದ ಕೆ. ಮ್ಯಾನ್ ಪವರ್ ಸಂಸ್ಥೆಯ ಪ್ರವೀಣ ಎನ್. ಸಂವಿತ್ ಸಂಸ್ಥೆಯ ಕಿರಣ್ ಕುಮಾರ್ ಉಪಸ್ಥಿತರಿದ್ದು ಮಾರ್ಗದರ್ಶನ ನೀಡಿದರು. ತಾಲೂಕ ಪಂಚಾಯತ ಸಂಜೀವಿನಿ ವಲಯ ಮೇಲ್ವಿಚಾರಕರಾದ ಬಾಲಚಂದ್ರ ನಾಯ್ಕ ಸ್ವಾಗತಿಸಿದರು. ವಿಶಾಲ್ ನಾಯ್ಕ ವಂದಿಸಿದರು.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ