May 12, 2024

Bhavana Tv

Its Your Channel

ಹೊನ್ನಾವರದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಹೊನ್ನಾವರದ ಪ್ರಭಾತ್ ನಗರದ ಮೂಡಗಣಪತಿ ಸಭಾಭವನದಲ್ಲಿ ಬಿಜೆಪಿ ಮಂಡಳದ ಘಟಕದಿಂದ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಯಿತು. ಶಾಸಕ ದಿನಕರ ಶೆಟ್ಟಿ ಹಾಗೂ ಭಟ್ಕಳ ಶಾಸಕ ಸುನೀಲ್ ನಾಯ್ಕ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಹೊನ್ನಾವರದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಶಾಸಕ ದಿನಕರ ಶೆಟ್ಟಿ ಅವರು ಪ್ರಧಾನಿ ಮೋದಿಯವರು ಮಾದರಿ ಆಡಳಿತ ನೀಡುತ್ತಿದ್ದು, ಜಗತ್ತಿನ ದೊಡ್ಡ ದೊಡ್ಡ ರಾಷ್ಟ್ರಗಳು ನಮ್ಮ ಬಗ್ಗೆ ವಿಮರ್ಶೆ ಮಾಡುತ್ತಿದೆ. ಮುಂದುವರಿದ ದೇಶಗಳೇ ಭಾರತದ ಕಡೆ ತಿರುಗಿ ನೋಡುವಂತಾಗಿದೆಯೆAದರೆ ಪ್ರತಿಯೊಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಬೇಕಾದ ವಿಚಾರ ಎಂದು ಹೇಳಿದರು.

ಹೊನ್ನಾವರದಲ್ಲಿ ಯುವ ಮೋರ್ಚಾ ಹಮ್ಮಿಕೊಂಡ ಬೈಕ್ ರ್ಯಾಲಿ ನಿರೀಕ್ಷೆಗೂ ಮೀರಿ ಯಶಸ್ಸು ಕಂಡಿದ್ದು ಕಾರ್ಯಕರ್ತರ ಹುರುಪಿನಿಂದ ನಮಗೆ ಜವಾಬ್ದಾರಿಗಳು ಹೆಚ್ಚುವಂತಾಗಿದೆ. ಪಕ್ಷ ಸಂಘಟಿಸುವಲ್ಲಿ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದ್ದು ಬಿಜೆಪಿ ನಿಷ್ಟಾವಂತರ ಪಡೆಯನ್ನು ಹೊಂದಿರುವುದು ಧನಾತ್ಮಕ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಮಂಡಳದ ಅಧ್ಯಕ್ಷ ರಾಜು ಭಂಡಾರಿ, ಉಮೇಶ ನಾಯ್ಕ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ ಹೆಗಡೆ, ಸುಬ್ರಾಯ ನಾಯ್ಕ, ಮಂಡಲದ ಪ್ರಧಾನ ಕಾರ್ಯದರ್ಶಿ ಸುರೇಶ ಹರಿಕಂತ್ರ, ಮಂಜುನಾಥ ನಾಯ್ಕ ಇದ್ದರು.

error: