May 19, 2024

Bhavana Tv

Its Your Channel

“ಯೋಗ ನನ್ನ ಪಾಲಿನ ಸುಯೋಗ” – ಮಾಸ್ಟರ್ ಆನಂದ್

ಹೊನ್ನಾವರ: ಶ್ರೀಕ್ಷೇತ್ರ ಬಂಗಾರಮಕ್ಕಿಯಲ್ಲಿ ಇಂದು ಶ್ರೀ ಮಾರುತಿ ರೆಸಿಡೆನ್ಶಿಯಲ್ ಸ್ಕೂಲ್‌ನ ವಿದ್ಯಾರ್ಥಿಗಳ ಸಹಯೋಗದೊಂದಿಗೆ 8ನೇ ಅಂರ‍್ರಾಷ್ಟ್ರೀಯ ಯೋಗ ದಿನಾಚರಣೆಯನ್ನು ಬಹಳ ವಿಜೃಂಭಣೆಯಿAದ ಆಚರಿಸಲಾಯಿತು. ದಿವ್ಯ ಸಾನಿಧ್ಯವನ್ನು ಕ್ಷೇತ್ರದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರು ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಖ್ಯಾತ ನಟ, ನಿರ್ದೇಶಕ, ನಿರೂಪಕ ಮಾಸ್ಟರ್ ಆನಂದ್ ಆಗಮಿಸಿ ಮಕ್ಕಳೊಂದಿಗೆ ಯೋಗಾಸನ ಮಾಡಿ ಯೋಗದ ಮಹತ್ವವನ್ನು ತಿಳಿಸಿ ಮಕ್ಕಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಅಂರ‍್ರಾಷ್ಟ್ರೀಯ ನೃತ್ಯ ಕಲಾವಿದ ಹಾಗೂ ನೃತ್ಯ ಸಂಯೋಜಕ ಶ್ರೀ ರಾಘವೇಂದ್ರ ಸಿ. ಕೆ. ಅವರು ಮಕ್ಕಳಿಗೆ ವಿಶೇಷವಾಗಿ ನೃತ್ಯದ ಮೂಲಕ ಯೋಗ ಮಾಡಿಸಿದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಜಿ. ಎಸ್. ನಾಯಕ್, ಪಾಲಕ-ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಶ್ರೀ ನರೇಂದ್ರ ನಾಯ್ಕ, ಶಾಲಾ ಆಡಳಿತ ನಿರ್ದೇಶಕರಾದ ಡಾ|| ಜಿ. ಟಿ. ಹೆಗಡೆ, ಸಂಸ್ಥೆಯ ಕಾರ್ಯದರ್ಶಿಗಳಾದ ಶ್ರೀಮತಿ ಅರ್ಪಿತಾ ಮಾರುತಿ ಗುರೂಜಿ, ಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಮಂಜುನಾಥ ಎಮ್. ಎನ್., ಪ್ರಾಂಶುಪಾಲರಾದ ಸಮೆಯ್ ಜಾನ್ ಬೋಸ್ಕೊ, ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಪಾಲಕರು ಭಾಗವಹಿಸಿದ್ದರು

error: