ಹೊನ್ನಾವರ: ಹೊನ್ನಾವರ ನ್ಯಾಯಾಲಯ ಆವರಣದಲ್ಲಿ ಶನಿವಾರ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 848 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡು ರೂ. 1,58,35,000/-(ಒಂದು ಕೋಟಿ ಐವತ್ತೇಂಟು ಲಕ್ಷ ಮುವತ್ತೆöÊದು ಸಾವಿರ) ಮೊತ್ತದ ಮೋಟಾರು ವಾಹನ ಅಪಘಾತ ವಿಮಾ ಪರಿಹಾರ ಹಣವನ್ನು ವಿತರಿಸಲು ತೀರ್ಮಾನಿಸಲಾಯಿತು. ಹಾಗೂ ರೂ. 25,000/- (ಇಪ್ಪತೈದು ಸಾವಿರ) ಕ್ಕೂ ಮೇಲ್ಪಟ್ಟು ದಂಡವನ್ನು ವಸೂಲಿ ನಡೆಯಿತು.
ಹೊನ್ನಾವರ ಹಿರಿಯ ಸಿವಿಲ್ ಜಡ್ಜ ನ್ಯಾಯಾಲಯದಲ್ಲಿ 12 ಮೋಟಾರು ವಾಹನ ಅಪಘಾತ ವಿಮಾ ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡು ರೂ. 1,58,35,000/- ಪರಿಹಾರ ನೀಡಲು ತಿರ್ಮಾನಿಸಲಾಯಿತು. 3 ಅಮಲ್ಜಾರಿ ಪ್ರಕರಣ, 1 ಸಿವಿಲ್ ಪ್ರಕರಣ ಇಟ್ಟು 16 ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡವು. ಹಿರಿಯ ಸಿವಿಲ್ ನ್ಯಾಯಾಧೀಶ ಕುಮಾರ ಜಿ ಹಾಗೂ ಸಂಧಾನಕಾರರಾಗಿ ನ್ಯಾಯವಾದಿ ವಿ.ಎಂ ಭಂಡಾರಿ ಉಪಸ್ಥಿತರಿದ್ದರು.
ಪ್ರಿನ್ಸಿಪಲ್ ಸಿವಿಲ್ ಜಡ್ಜ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ 667 ಕ್ರಿಮಿನಲ್, 8 ಸಿವಿಲ್ ಪ್ರಕರಣಗಳು ರಾಜಿ ಮೂಲಕ ಇತ್ಯರ್ಥಗೊಂಡವು. ಹೆಚ್ಚುವರಿ ಸಿವಿಲ್ ನ್ಯಾಯಾಲಯದಲ್ಲಿ 13 ಸಿವಿಲ್ ಪ್ರಕರಣಗಳು, 147 ಕ್ರಿಮಿನಲ್ ಪ್ರಕರಣಗಳು, ರಾಜಿ ಮೂಲಕ ಇತ್ಯರ್ಥಗೊಂಡವು. ನ್ಯಾಯಾಧೀಶ ಚಂದ್ರಶೇಖರ ಬಣಕಾರ್ ಹಾಗೂ ಸಂಧಾನಕಾರರಾಗಿ ಸುರೇಶ ಚಂದಾವರ ವಕೀಲರು ಉಪಸ್ಥಿತರಿದ್ದರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್