ಹೊನ್ನಾವರ :-ತಾಲೂಕ ಆಸ್ಪತ್ರೆ ಹೊನ್ನಾವರದಲ್ಲಿ ದ್ವೀತಿಯ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಪುಷ್ಪಾ ಮಡಿವಾಳರವರು ವಯೋ ನಿವೃತ್ತಿ ಹೊಂದುತ್ತಿರುವ ಪ್ರಯುಕ್ತ ಆಸ್ಪತ್ರೆಯ ಎಲ್ಲ ವೈದ್ಯರುಗಳು ಮತ್ತು ಸಿಬ್ಬಂದಿಗಳು ಆತ್ಮೀಯವಾಗಿ ಬಿಳ್ಕೋಡುವ ಕಾರ್ಯಕ್ರಮ ಜರುಗಿತು.
ಆಸ್ಪತ್ರೆಯ ಸ್ತಿçà ರೋಗ ತಜ್ಞರಾದ ಡಾ|| ಕೃಷ್ಣಾ ಜಿ ರವರು ಮಾತನಾಡುತ ಪುಷ್ಪಾ ರವರು ಪ್ರಾಮಾಣಿಕ ಸೇವೆ ನೀಡಿದ್ದಾರೆ. ಆಡಳಿತಾತ್ಮಕ ವಿಭಾಗದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ.ಅವರ ನಿವೃತ್ತಿ ಜೀವನ ಚೆನ್ನಾಗಿರಲಿ ಎಂದು ಹಾರೈಸಿದರು. ಅವರ ಜೊತೆಗಿನ ವೃತ್ತಿ ಜೀವನದ ಘಟನಾವಳಿಗಳನ್ನು ನೆನಪಿಸಿಕೊಂಡರು. ಶಸ್ತç ಚಿಕಿತ್ಸಕ ತಜ್ಞರಾದ ಡಾ|| ಮಂಜುನಾಥ ಶೆಟ್ಟಿರವರು ಮಾತನಾಡುತ್ತ “ ಪುಷ್ಪಾರವರ ತಾಳ್ಮೆ ಎಲ್ಲರಿಗೂ ಮಾದರಿ. ಯಾವತ್ತು ಇನ್ನೊಬ್ಬರ ಮೇಲೆ ಮುನಿಸಿಕೊಂಡವರಲ್ಲ. ವೃತ್ತಿ ಜೀವನದಲ್ಲಿ ನಿವೃತ್ತಿ ಅನಿವರ್ಯ. ಅವರ ಮುಂದಿನ ಜೀವನ ಉತ್ತಮವಾಗಿರಲಿ” ಎಂದು ಹೇಳಿದರು.ಸಹಾಯಕ ಆಡಳಿತಾಧಿಕಾರಿ ಶ್ರೀಮತಿ ಶಶಿಕಲಾ ನಾಯ್ಕ ಮಾತನಾಡುತ್ತ “ ಆಡಳಿತ ವಿಭಾಗದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ. ಯಾವುದೇ ಲೋಪವಾಗದಂತೆ ಕಾರ್ಯನಿರ್ವಹಿಸುವುದು ಅವರ ವಿಶೇಷತೆ” ಎಂದು ಹೇಳಿದ್ದರು. ಇತರೆ ಸಿಬ್ಬಂಧಿಗಳು ತಮ್ಮ ಅಭಿಪ್ರಾಯ ಹಂಚಿಕೊAಡರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಆಡಳಿತಾಧಿಕಾರಿ ಡಾ|| ರಾಜೇಶ ಕಿಣಿ ರವರು ಮಾತನಾಡುತ್ತ “ಪುಷ್ಪಾ ರವರು ಆಡಳಿತ ಕಛೇರಿಯಲ್ಲಿ ಮಹತ್ತರವಾದ ಏ.ಆರ್.ಎಸ್ ಹಣಕಾಸು ವಿಭಾಗವನ್ನು ದಕ್ಷವಾಗಿ, ಮತ್ತು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.ಪ್ರಾಮಾಣಿಕ ಸೇವೆ ಸಲ್ಲಿಸಿದ್ದಾರೆ ಎಂದು ಅವರ ಕಾರ್ಯನಿರ್ವಹಣೆ ಬಗ್ಗೆ ಮಾತನಾಡಿದ್ದರು. ಸ್ವಾಗತ ಭಾಷಣ ಮಾಡಿದ ಕ್ಷ ಕಿರಣ ತಂತ್ರಜ್ಞರಾದ ಚಂದ್ರಶೇಖರ ಕಳಸ ರವರು ಸ್ವರಚಿತ ಕವನವನ್ನು ವಾಚಿಸುವದರ ಮೂಲಕ ಪುಷ್ಪಾರವರ ನಿವೃತ್ತಿ ಜೀವನಕ್ಕೆ ಶುಭಹಾರೈಸಿದರು. ಸಿಬ್ಬಂಧಿಗಳಾದ ವೆಂಕಟೇಶ ಜೆ ರವರ ಪ್ರಾರ್ಥನೆ ಮೂಲಕ ಕಾರ್ಯಕ್ರಮ ಪ್ರಾರಂಭಿಸಲಾಯಿತು.ಪುಷ್ಪಾರವರಿಗೆ ಶಾಲು ಹೊದಿಸಿ, ನೆನಪಿನ ಕಾಣಿಕೆ ನೀಡಿ ಸನ್ಮಾನಿಸಲಾಯಿತು.ಮಂಗಲಾರವರು ವಂದಿಸಿದರು. ಆಪ್ತಸಮಾಲೋಚಕರಾದ ವಿನಾಯಕ ಎಲ್ ಪಟಗಾರ ಕಾರ್ಯಕ್ರಮ ನಿರ್ವಹಿಸಿದರು. ಆಸ್ಪತ್ರೆಯ ಎಲ್ಲ ವೈದ್ಯರುಗಳು, ಸಿಬ್ಬಂಧಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು ಪುಷ್ಪಾರವರಿಗೆ ನಿವೃತ್ತಿ ಜೀವನಕ್ಕೆ ಶುಭ ಹಾರೈಸಿದರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್