ಹೊನ್ನಾವರದ ಸೆಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಕುಮಾರಿ ಧನುಶ್ರೀ ಬಾನವಾಳಿಕರ್ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಶೈನ್ ಸ್ಪೋರ್ಟ್ಸ್ ಅಕಾಡೆಮಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಆಹ್ವಾನಿತ ತಂಡಗಳ ಕರಾಟೆ ಚಾಂಪಿಯನ್ ಶಿಪ್ನಲ್ಲಿ ಪ್ರಥಮ ಸ್ಥಾನ ಪಡೆಯುವ ಮೂಲಕ ಸಾಧನೆ ಗೈದಿದ್ದಾಳೆ.
ಇವಳು ಹೊನ್ನಾವರದ ರೇಷ್ಮಾ ಮತ್ತು ರಮಾಕಾಂತ್ ಬಾನವಳಿಕರ್ ದಂಪತಿಯ ಪುತ್ರಿಯಾಗಿದ್ದು ಸೈಂಟ್ ಥೋಮಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದು ಬುಡೋಕಾನ್ ಕರಾಟೆ ಹಾಗೂ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ಮುಖ್ಯ ಶಿಕ್ಷಕರಾದ ರೆಂಷಿ.ವಾಮನ್ ಪಾಲನ್ ಹಾಗೂ ಪ್ರಜ್ವಲ್ ಶೆಟ್ಟಿ ಬಳಿ ಕರಾಟೆ ತರಬೇತಿ ಪಡೆಯುತ್ತಿದ್ದಾಳೆ.
ಇವಳ ಸಾಧನೆಗೆ ಶಾಲಾ ಮುಖ್ಯಸ್ಥರಾದ ರೆ|| ಫಾದರ್ ಲಿಝೋ ಚಾಕೋ ಖಜಾಂಚಿ ಕೆ. ಸಿ. ವರ್ಗೀಸ್, ಪ್ರಾಂಶುಪಾಲರಾದ ಥೆರೇಸಾ ಫರ್ನಾಂಡೀಸ್ ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದಿಸಿದರು. ಮುಂದಿನ ಸಾಧನೆಗೆ ಹಾರೈಸಿದರು.
ಕಡಿಮೆ ಅವಧಿಯಲ್ಲಿ ತರಬೇತಿ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ಧನುಶ್ರಿ ಯನ್ನು ಶಾಲಾ ಶಿಕ್ಷಕರು , ತರಬೇತುದಾರರು , ಪಾಲಕ ಪೋಷಕರು ,ವಿದ್ಯಾರ್ಥಿಗಳು ಅಭಿನಂದಿಸಿದರು.
More Stories
ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಕೂಜಳ್ಳಿಯ ಹಿರಿಯ ಜೀವ ಅನಸೂಯಾ ಹೆಗಡೆ,
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,