May 16, 2024

Bhavana Tv

Its Your Channel

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕ ಶಾಖೆ ಹೊನ್ನಾವರ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮ

ಹೊನ್ನಾವರ:- ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕ ಶಾಖೆ ಹೊನ್ನಾವರ ವತಿಯಿಂದ ಹರ್ ಘರ್ ತಿರಂಗಾ ಕಾರ್ಯಕ್ರಮ ಯಶಸ್ವಿಗೊಳಿಸಲು ಸರ್ಕಾರಿ ನೌಕರಿಗೆ ತ್ರಿವರ್ಣ ಧ್ವಜ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ತಾಲೂಕಿನ ತಹಶೀಲ್ದಾರರಾದ ನಾಗರಾಜ್ ನಾಯ್ಕಡ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಜಿ.ಎಸ್. ನಾಯ್ಕ ಉಪಸ್ಥಿತರಿದ್ದರು. ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷರಾದ ರಾಜಕುಮಾರ್ ನಾಯ್ಕ ಮಾತನಾಡಿ ಅಭಿಯಾನವನ್ನು ರಾಜ್ಯಾಧ್ಯಕ್ಷರಾದ ಶ್ರೀ ಸಿ.ಎಸ್. ಷಡಕ್ಷರಿ ಅವರ ಸೂಚನೆಯಂತೆ ಸರಕಾರಿ ನೌಕರರು ಅಭಿಯಾನದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು. ಕಾರ್ಯದರ್ಶಿಗಳಾದ ಅಣ್ಣಪ್ಪ ಮುಕ್ರಿ ಎಲ್ಲರನ್ನು ಸ್ವಾಗತಿಸಿದರು. ರಾಜ್ಯ ಪರಿಷತ್ ಸದಸ್ಯರಾದ ಎಂ.ಜಿ.ನಾಯ್ಕ ಅಭಿನಂದಿಸಿದರು ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಘದ ಪದಾಧಿಕಾರಿಗಳಿಗೆ, ನಿರ್ದೇಶಕರಿಗೆ ಸರ್ಕಾರಿ ನೌಕರರಿಗೆ ತ್ರಿವರ್ಣ ಧ್ವಜ ವಿತರಿಸಲಾಯಿತು.

error: