May 16, 2024

Bhavana Tv

Its Your Channel

ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಿ- ವಿನೋದ್ ಅಣ್ವೇಕರ್

ಹೊನ್ನಾವರ:- ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಹಾಗೂ ತಾಲೂಕ ಪಂಚಾಯತ್ ಹೊನ್ನಾವರದ ಆಡಳಿತಾಧಿಕಾರಿಗಳಾದ ವಿನೋದ್ ಅಣ್ವೇಕರ್ ರವರು ತಿಳಿಸಿದರು.

     ಸ್ವಾತಂತ್ರ‍್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆಗಸ್ಟ್ 2022ರ ಮಾಹೆಯ ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ಪ್ರತಿ ಮನೆ, ಸರ್ಕಾರಿ ಕಚೇರಿ, ಅಂಗನವಾಡಿ ಕೇಂದ್ರ, ಶಾಲೆಗಳು, ಗ್ರಾಮ ಪಂಚಾಯತ್ ಗ್ರಂಥಾಲಯ, ಪ್ರಾಥಮಿಕ ಆರೋಗ್ಯ ಕೇಂದ್ರ, ಸಹಕಾರಿ ಸಂಘ ಸಂಸ್ಥೆಗಳು, ಸರ್ಕಾರಿ ಕಟ್ಟಡಗಳಲ್ಲಿ ಧ್ವಜ ಹಾರಿಸಲು ಸರ್ಕಾರದ ನಿಯಮಾನುಸಾರ ಕ್ರಮವಹಿಸಿ ಅಭಿಯಾನವನ್ನ ಯಶಸ್ವಿಗೊಳಿಸಲು ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿಗಳು ಹಾಗೂ ತಾಲೂಕ ಪಂಚಾಯತ್ ಹೊನ್ನಾವರದ ಆಡಳಿತಾಧಿಕಾರಿಗಳಾದ ವಿನೋದ್ ಅಣ್ವೇಕರ್ ರವರು ತಿಳಿಸಿದರು.

ದಿನಾಂಕ 08-08-2022 ರಂದು ಹೊನ್ನಾವರ ತಾಲೂಕ್ ಪಂಚಾಯತ್ ಸಭಾಭವನದಲ್ಲಿ ಜಿಲ್ಲಾಡಳಿತ ಮತ್ತು ಸಹಾಯ ಸಂಘಗಳಿAದ ಪೂರೈಸಿದ ರಾಷ್ಟ್ರಧ್ವಜವನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸಾಂಕೇತಿಕವಾಗಿ ಹಸ್ತಾಂತರಿಸಿ ತಾಲೂಕಿನಲ್ಲಿ ಕಾರ್ಯಕ್ರಮ ಯಶಸ್ವಿಗೊಳಿಸಲು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ತಾಲೂಕ್ ಪಂಚಾಯತ್ ಹೊನ್ನಾವರದ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ ನಾಯ್ಕ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚನ್ನಬಸಪ್ಪ ಮಹಾಜನಶೆಟ್ಟಿ, ಉದಯ ಕುಮಾರ ಪಿ, ಶ್ರೀಧರ್ ಪಟಗಾರ ಎನ್ ಆರ್ ಎಂ ಮೇಲ್ವಿಚಾರಕರಾದ ಬಾಲಚಂದ್ರ ನಾಯ್ಕ ವಿಶಾಲ ನಾಯ್ಕ ಹಾಜರಿದ್ದರು.

error: