May 5, 2024

Bhavana Tv

Its Your Channel

ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿ, ರಾಜ್ಯಮಟ್ಟಕ್ಕೆ ಆಯ್ಕೆ

ಹೊನ್ನಾವರ: ದಿನಾಂಕ 20/08/2022 ರಂದು ಶನಿವಾರ ಕಾರವಾರದ ವಿe್ಞÁನ ಕೇಂದ್ರದಲ್ಲಿ ನಡೆದ ಜಿಲ್ಲಾಮಟ್ಟದ ವಿe್ಞÁನ ರಸಪ್ರಶ್ನೆ ಸ್ಪರ್ಧೆಯಲ್ಲಿ ಕರ್ಕಿ ಶ್ರೀ ಚೆನ್ನಕೇಶವ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಕುಮಾರ ತುಷಾರ ನಾಯ್ಕ ಮತ್ತು ಕುಮಾರಿ ಪವಿತ್ರ ನಾಯ್ಕ ಇವರುಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ.ಇವರಿಗೆ ಜಿಲ್ಲಾ ಉಪ ಸಮನ್ವಯ ಅಧಿಕಾರಿಗಳಾದ  ಲತಾ ನಾಯಕ್ ಇವರು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಿದ್ದಾರೆ.
        ವಿದ್ಯಾರ್ಥಿಗಳ ಸಾಧನೆಗೆ ಕಾರಣರಾದ ವಿe್ಞÁನ ಶಿಕ್ಷಕರಾದ  ಶ್ರೀಕಾಂತ ಹಿಟ್ನಳ್ಳಿ ಮತ್ತು ಕುಮಾರಿ ಕವಿತಾ ನಾಯ್ಕರಿಗೂ ಅಭಿನಂದನೆ ಸಲ್ಲುತ್ತದೆ. ವಿದ್ಯಾರ್ಥಿಗಳಿಗೂ,ಶಿಕ್ಷಕರಿಗೂ ಆಡಳಿತ ಮಂಡಳಿಯ ಅಧ್ಯಕ್ಷರು, ಮುಖ್ಯಾಧ್ಯಾಪಕರು, ಮಾನ್ಯ ಶಿಕ್ಷಣಾಧಿಕಾರಿಗಳಾದ ಜಿ.ಎಸ್.ನಾಯ್ಕರವರು ಅಭಿನಂದನೆ ಸಲ್ಲಿಸಿ ರಾಜ್ಯ ಮಟ್ಟದಲ್ಲೂ ಸಾಧನೆ ಮಾಡಿ, ಪ್ರಥಮ ಸ್ಥಾನ ಬರುವಂತಾಗಲಿ ಎಂದು ಶುಭ ಹಾರೈಸಿದ್ದಾರೆ
error: