ಹೊನ್ನಾವರ ಅ. 25 : ಶಿಕ್ಷಕಿ, ಲೇಖಕಿ, ಇತಿಹಾಸಜ್ಞೆ, ಆಕಾಶವಾಣಿ ನಿರ್ದೇಶಕಿ ಹೀಗೆ ಹಲವು ರೀತಿಯಲ್ಲಿ ನಾಡಿಗೆ ಸಂದ ಜ್ಯೋತ್ಸ್ನಾ ಕೃಷ್ಣಾನಂದ ಕಾಮತ ಇವರು ಇಂದು ದಿನಾಂಕ 24ರಂದು ಸಂಜೆ 4ಗಂಟೆಗೆ ಬೆಂಗಳೂರು ಸ್ವಗೃಹದಲ್ಲಿ 85ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಪತಿ, ಹೆಸರಾಂತ ಲೇಖಕ ದಿವಂಗತ ಡಾ. ಕೃಷ್ಣಾನಂದ ಕಾಮತರ ಸಾಹಿತ್ಯಕ್ಕೆ ಸ್ಫೂರ್ತಿಯಾಗಿ, ಬಾಳಸಂಗಾತಿಯಾಗಿ ಅನ್ಯೋನ್ಯ ಸಾಹಿತ್ಯ ದಂಪತಿಗಳ ಜೋಡಿಯೆಂದು ನಾಡಿಗೆ ಪರಿಚಿತರಾಗಿದ್ದರು.
1937ರಲ್ಲಿ ಜನಿಸಿದ ಜ್ಯೋತ್ಸಾö್ನರ ತಂದೆ ಗಣೇಶ ರಾವ್ ಕುಮಟಾದವರು. ಪೋಸ್ಟ ಮಾಸ್ತರರಾಗಿದ್ದರು, ಇಂಗ್ಲೀಷ್, ಕನ್ನಡ ಸಾಹಿತ್ಯ ಪ್ರಿಯರಾಗಿದ್ದರು. ಮನೆಯಲ್ಲಿ ಗ್ರಂಥಾಲಯವಿತ್ತು. ಜ್ಯೋತ್ಸ್ನಾರಲ್ಲಿ ಸಹಜವಾಗಿ ಸಾಹಿತ್ಯಾಸಕ್ತಿ ಬೆಳೆಯಿತು. ಅವರು ಶಿಕ್ಷಕಿಯಾಗಿ ವೃತ್ತಿ ಆರಂಭಿಸಿ ಸಾಹಿತ್ಯದ ಅಧ್ಯಯನ ಮುಂದುವರಿಸಿದರು. ಇತಿಹಾಸದಲ್ಲಿ ಎಂಎ ಓದಿದ ಜ್ಯೋತ್ಸಾö್ನ ಧಾರವಾಡ ಆಕಾಶವಾಣಿಯ ಕಾರ್ಯನಿರ್ವಾಹಕಿಯಾಗಿ ಆಯ್ಕೆಗೊಂಡು ದೇಶದ ನಾನಾಭಾಗಗಳಲ್ಲಿ ನಿಲಯ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸಿ 1994ರಲ್ಲಿ ಬೆಂಗಳೂರಿನಲ್ಲಿ ನಿವೃತ್ತಿ ಪಡೆದರು. ಅಲೆಮಾರಿ ಸಾಹಿತಿ ಎಂದು ಪ್ರಸಿದ್ಧರಾಗಿದ್ದ ಹೊನ್ನಾವರ ಕೃಷ್ಣಾನಂದ ಕಾಮತರನ್ನು 1966ರಲ್ಲಿ ವಿವಾಹವಾದ ಜ್ಯೋತ್ಸಾö್ನ ಸಮಾನ ಆಸಕ್ತಿ, ಮನೋಭಾವ, ಧ್ಯೇಯಗಳಿಂದಾಗಿ ಇವರು ಆದರ್ಶ ಸಾಹಿತಿಗಳ ಜೋಡಿ ಅನಿಸಿಕೊಂಡರು. ಮಗ ವಿಕಾಸ ಜನಿಸಿದ ಮೇಲೆ ಡಾಕ್ಟರೇಟ್ ಮಾಡಿದ ಜ್ಯೋತ್ಸಾö್ನ ಸಂಸಾರದಲ್ಲಿ ಸ್ವಾರಸ್ಯ, ಕರ್ನಾಟಕ ಶಿಕ್ಷಣ ಪರಂಪರೆ, ಹೀಗಿದ್ದೇವೆ ನಾವು ಮೊದಲಾದ ಕೃತಿಗಳನ್ನು ರಚಿಸಿದ್ದಾರೆ. ಬಹುಭಾಷೆಯನ್ನು ಬಲ್ಲ ಇವರಿಗೆ ಸಾಹಿತ್ಯ ಅಕಾಡೆಮಿ ಮತ್ತು ರಾಜ್ಯಸರ್ಕಾರ ಗೌರವಿಸಿದೆ.
ವಿದೇಶ ನೋಡಿ ಬಂದ ಕೃಷ್ಣಾನಂದ ಕಾಮತ ದೇಶದ ಉದ್ದಗಲ ಓಡಾಡುತ್ತಾ ಅಪರೂಪದ ಕೃತಿಗಳನ್ನು ರಚಿಸುತ್ತಿದ್ದರೆ ಇನ್ನೊಂದು ಊರಿನಲ್ಲಿ ಆಕಾಶವಾಣಿ ವೃತ್ತಿಯಲ್ಲಿದ್ದ ಜ್ಯೋತ್ಸಾö್ನ ಅವರ ಜೀವನ ಪತಿಪತ್ನಿಯರಿಗಿಂತ ಗೆಳೆಯ ಗೆಳತಿಯರ ಜೀವನದಂತೆ ಸಾಮರಸ್ಯ ಹಾಗೂ ಸಂತೋಷದಿAದ ಸಾಗಿತ್ತು. ಮಗ ವಿಕಾಸ್ ಕಾಮತ್ 25 ವರ್ಷಗಳಿಂದ ಅಮೇರಿಕಾದಲ್ಲಿ ನೆಲೆಸಿದ್ದು ಕಾಮತ್ಪಾಟ್ಪುರಿ, ಕಾಮತ್ಡಾಟ್ಕಾಮ್ ವೆಬ್ಸೈಟ್ 25ವರ್ಷದ ಹಿಂದೆ ಆರಂಭಿಸಿ ಡಾ. ಕೃಷ್ಣಾನಂದ ಕಾಮತ್ ಇವರ ಲಕ್ಷಾಂತರ ಫೋಟೋ, ಬರಹ ಮತ್ತು ಜೋತ್ಸಾö್ನ ಕಾಮತರ ಬರಹಗಳನ್ನು ವೆಬ್ಸೈಟ್ನಲ್ಲಿ ತುಂಬಿಸಿದ್ದು ಈ ವೆಬ್ಸೈಟ್ಗಳು ಇಂದಿಗೂ ಭಾರತದ ಕುರಿತು ಅಧ್ಯಯನ ಮಾಡಲು ಜಗತ್ತಿನಲ್ಲಿ ಬಳಕೆಯಾಗುತ್ತಿದ್ದು ದಿನಕ್ಕೆ ಲಕ್ಷಾಂತರ ಜನ ಈ ವೆಬ್ಸೈಟ್ ವೀಕ್ಷಿಸುತ್ತಾರೆ. ಈ ಮೂಲಕ ಡಾ. ಕಾಮತ್ ದಂಪತಿಗಳು ಸಾಹಿತ್ಯ ಲೋಕದಲ್ಲಿ ಚಿರಂಜೀವಿಗಳಾಗಿದ್ದಾರೆ.
ಕೃಷ್ಣಾನಂದ ಕಾಮತರ ಹೆಸರಿನಲ್ಲಿ ಹೊನ್ನಾವರದಲ್ಲಿ ವಾಚನಾಲಯವನ್ನು ಸ್ಥಾಪಿಸಿದ್ದು ಪ್ರತಿವರ್ಷ ಕಾಮತರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಾ, ಸಾಹಿತ್ಯ ವಿಚಾರ ಸಂಕಿರಣಗಳನ್ನು ಏರ್ಪಡಿಸುತ್ತಾ ಸಾಹಿತ್ಯ ಚಟುವಟಿಕೆಯಲ್ಲಿ ಜ್ಯೋತ್ಸಾö್ನ ಕಾಮತ್ ಸಕ್ರೀಯರಾಗಿದ್ದರು. ಪ್ರಸಿದ್ಧ ಜವಳಿ ವ್ಯಾಪಾರಿಗಳಾದ ಲಕ್ಷö್ಮಣ ಕಾಮತ್ ಕುಟುಂಬದ ಹಿರಿಯ ಸೊಸೆಯಾಗಿದ್ದ ಜ್ಯೋತ್ಸ್ನಾ ಕಾಮತ್ ನಿಧನಕ್ಕೆ ಅರ್ಬನ್ ಬ್ಯಾಂಕ ಅಧ್ಯಕ್ಷ ರಾಘವ ಬಾಳೇರಿ, ಹತ್ತು ಸಮಸ್ತರ ಸಮಿತಿಯ ಅಧ್ಯಕ್ಷ ನರೇಂದ್ರ ಕಾಮತ್, ಉದ್ಯಮಿ ರಾಘವ ಪೈ, ಜಿಎಸ್ಬಿ ಮಹಿಳಾ ವಾಹಿನಿ ಸದಸ್ಯರು, ಶಾಸಕ ದಿನಕರ ಶೆಟ್ಟಿ, ಶಾಸಕ ಸುನೀಲ ನಾಯ್ಕ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ವರದಿ ಕೃಪೆ:- ಜಿ ಯು ಭಟ್ ಹೊನ್ನಾವರ
More Stories
ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.