May 17, 2024

Bhavana Tv

Its Your Channel

ತಾಲೂಕ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಪಟ್ಟಣ ಪಂ.ಅಧ್ಯಕ್ಷ ಶಿವರಾಜ ಮೇಸ್ತ ಚಾಲನೆ

ಹೊನ್ನಾವರ ; ಪಟ್ಟಣದ ಎಸ್.ಡಿ.ಎಂ.ಕಾಲೇಜಿನ ಕ್ರೀಡಾಂಗಣದಲ್ಲಿ ತಾಲೂಕ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಪ.ಪಂ.ಅಧ್ಯಕ್ಷ ಶಿವರಾಜ ಮೇಸ್ತ ಧ್ವಜಾರೋಹಣ ನೇರವೇರಿಸುವ ಮೂಲಕ ಚಾಲನೆ ನೀಡಿದರು.

    ಜಿಲ್ಲಾಡಳಿತ, ಜಿಲ್ಲಾ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ತಾಲೂಕಿನ ವಿವಿಧ ಇಲಾಖೆ ಹಾಗೂ ತಾಲೂಕ ಯುವ ಒಕ್ಕೂಟದ ವತಿಯಿಂದ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿ ಇಂದು ರಾಷ್ಟ್ರಮಟ್ಟದ ಕ್ರೀಡೆಯಲ್ಲಿ ಸಾಧನೆ ಮಾಡಿದವರು ಪ್ರಥಮವಾಗಿ ಇಂತಹ ಕ್ರೀಡೆಯಲ್ಲಿ ಭಾಗವಹಿಸಿಯೇ ಅಂತಹ ಸಾಧನೆಗೆ ಕಾರಣರಾಗಿದ್ದಾರೆ. ಸೋಲು ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುದು ಮುಖ್ಯ. ಒಂದು ಗುರಿ ಇಟ್ಟು ಸ್ಪರ್ಧೆ ನೀಡಿದರೆ ಸಾಧನೆ ಮಾಡಲು ಖಂಡಿತಾ ಸಾಧ್ಯ. ತಾಲೂಕಿನ ಕ್ರೀಡಾಪಟುಗಳು ರಾಜ್ಯ ರಾಷ್ಟ್ರಮಟ್ಟದ ಸಾಧನೆ ಮಾಡುವ ಮೂಲಕ ಕೀರ್ತಿ ತರುವಂತೆ  ಶುಭಹಾರೈಸಿದರು. 

ತಹಶೀಲ್ದಾರ ನಾಗರಾಜ ನಾಯ್ಕಡ್ ಮಾತನಾಡಿ ಗ್ರಾಮೀಣ ಭಾಗದ ಹಲವು ಕ್ರೀಡಾಪಟುಗಳಿಗೆ ಸಿಗುವ ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಜೊತೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಸುರೇಶ ನಾಯ್ಕ ಮಾತನಾಡಿ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಪಟುಗಳು ಆಗಮಿಸಿರುವುದು ಸಂತಸ ಮೂಡಿಸಿದೆ. ಪ್ರತಿ ವ್ಯಕ್ತಿಯ ಉತ್ಸಾಹದಿಂದ ಇರಲು ಕ್ರೀಡೆಯಿಂದ ಸಾಧ್ಯ. ಸರ್ಕಾರ ಇದನ್ನು ಮನಗಂಡು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ವೇದಿಕೆಯಲ್ಲಿ ಪ.ಪಂ.ಉಪಾಧ್ಯಕ್ಷೆ ನಿಶಾ ಶೇಟ್, ಎಸ್.ಡಿ.ಎಂ.ಕಾಲೇಜಿನ ದೈಹಿಕ ಶಿಕ್ಷಕ ನಿರ್ದೆಶಕ ಆರ್.ಕೆ.ಮೇಸ್ತ, ಎ.ಎಸೈ ಗಿರೀಶ ಶೆಟ್ಟಿ, ದೈಹಿಕ ಶಿಕ್ಷಕ ಸಂಘದ ಜಿಲ್ಲಾಧ್ಯಕ್ಷೆ ಸಾಧನಾ ಬರ್ಗಿ, ಪ್ರೌಢಶಾಲಾ ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಮಹೇಶ ಶೆಟ್ಟಿ, ದೈಹಿಕ ಶಿಕ್ಷಕ ಸಂಘದ ತಾಲೂಕ ಅಧ್ಯಕ್ಷ ಬಾಬು ನಾಯ್ಕ ಯುವಜನಸೇವಾ ಕ್ರೀಡಾಧಿಕಾರಿ ಸುಧೀಶ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು ಸಭಾ ಕಾರ್ಯಕ್ರಮದ ಬಳಿಕ ವಿವಿಧ ಕ್ರೀಡಾ ಕಾರ್ಯಕ್ರಮಗಳು ಜರುಗಿದವು.

ವರದಿ: ವೆಂಕಟೇಶ ಮೇಸ್ತ ಹೊನ್ನಾವರ

error: