May 17, 2024

Bhavana Tv

Its Your Channel

ಪೊಲೀಸ್ ಇಲಾಖೆಯ ವತಿಯಿಂದ ಪ್ರತಿಷ್ಠಾಪಿಸಿದ ಗಣಪತಿಗೆ ವಿಶೇಷ ಪೂಜೆ

ಹೊನ್ನಾವರ: ಹೊನ್ನಾವರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಪೊಲೀಸ್ ಇಲಾಖೆಯ ವತಿಯಿಂದ ಪ್ರತಿಷ್ಠಾಪಿಸಿ ಪೂಜಿಸಲ್ಪಡುವ ಗಣಪತಿಗೆ ಬುಧವಾರ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಕುಟುಂಬವರ್ಗದವರು ವಿಶೇಷ ಪೂಜೆ ಸಲ್ಲಿಸಿದರು.

ಪ್ರತಿದಿನವೂ ಖಾಕಿ ತೊಟ್ಟು ಕರ್ತವ್ಯ ನಿರ್ವಹಿಸುವ ಪೊಲೀಸ್ ಇಲಾಖೆಯವರು ಪೂಜಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಪೂರಕವಾಗಿ ಸಾಂಪ್ರದಾಯಿಕ ಬಟ್ಟೆ ತೊಟ್ಟು ಗಮನ ಸೆಳೆದರು.

ಗಣೇಶ ಚತುರ್ಥಿ ಹಬ್ಬದ ಎಂಟನೇ ದಿನವಾದ ಬುಧವಾರ ಪೊಲೀಸ್ ಠಾಣೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಕುಟುಂಬದವರಿAದ ವಿಶೇಷ ಪೂಜೆ ಸಲ್ಲಿಸಲಾಯಿತು. ಪೂಜಾ ಸಂದರ್ಭದಲ್ಲಿ ಧಾರ್ಮಿಕ ಆಚರಣೆಗೆ ಪೂರಕವಾಗಿ ಸಾಂಪ್ರದಾಯಿಕ ಧಿರಿಸು ತೊಟ್ಟು ಗಮನ ಸೆಳೆದರೆ, ಮಹಿಳಾ ಸಿಬ್ಬಂದಿಗಳು ಹಾಗೂ ಪುಟಾಣಿಗಳು ಬಣ್ಣಬಣ್ಣದ ಉಡುಗೆ ತೊಟ್ಟು ಸಂಭ್ರಮಿಸಿದರು. ಗಣಪತಿ ಪ್ರತಿಷ್ಠಾಪಿಸಲಾದ ಆವರಣವನ್ನು ಫಲ ಪುಷ್ಪಗಳಿಂದ ಶೃಂಗರಿಸಲಾಗಿತ್ತು. ಅರ್ಚಕರು ಪೂಜಾ ವಿಧಿ ವಿಧಾನಗಳನ್ನು ನಡೆಸಿಕೊಟ್ಟರು. ಗುಮ್ಟೆಪಾಂಗ್ ವಾದ್ಯಗಳೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ಭಜನೆ ಮಾಡಲಾಯಿತು. ಮಹಾಮಂಗಳಾರತಿ ಪೂಜೆಯ ನಂತರ ಅನ್ನಸಂತರ್ಪಣೆ ನಡೆಯಿತು.
ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಧೀಶ ಕುಮಾರ ಜಿ, ತಹಶಿಲ್ದಾರ್ ನಾಗರಾಜ್ ನಾಯ್ಕಡ್, ಗ್ರೇಡ್ ೨ ತಹಶಿಲ್ದಾರ್ ಉಷಾ ಪಾವಸ್ಕರ್, ಪ.ಪಂ ಅಧ್ಯಕ್ಷ ಶಿವರಾಜ ಮೇಸ್ತ, ಸಿಪಿಐ ಶ್ರೀಧರ್ ಎಸ್.ಆರ್., ಪಿಎಸ್‌ಐ ಸಾವಿತ್ರಿ ನಾಯಕ, ಮಹಾಂತೇಶ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಶ್ರೀ ದೇವರ ಪ್ರಸಾದ ಸ್ವೀಕರಿಸಿದರು
ವರದಿ: ವೆಂಕಟೇಶ ಮೇಸ್ತ ಹೊನ್ನಾವರ

error: