ಹೊನ್ನಾವರ: ಮಹಿಮೆ ಗ್ರಾಮದ ಶಂಕರಮಕ್ಕಿ ಮಜಿರೆಯ ಹಳ್ಳದ ಕಾಲುಸಂಕ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು ಜನರ ಓಡಾಟಕ್ಕೆ ಮತ್ತು ಮಕ್ಕಳಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ
ಹೊನ್ನಾವರ ತಾಲೂಕಿನ ಮಹಿಮೆ ಗ್ರಾಮದ ಶಂಕರಮಕ್ಕಿ ಮಜಿರೆಯ ಹಳ್ಳದ ಕಾಲುಸಂಕ ನೀರಿನ ರಭಸಕ್ಕೆ ಕೊಚ್ಚಿಹೋಗಿದ್ದು ಜನರ ಓಡಾಟಕ್ಕೆ ಮತ್ತು ಮಕ್ಕಳಿಗೆ ಶಾಲೆಗೆ ಹೋಗಲು ಸಾಧ್ಯವಾಗುತ್ತಿಲ್ಲ. ಹಲವಾರು ವರ್ಷಗಳಿಂದ ಶಾಸಕರಿಗೆ ಮನವಿಕೊಟ್ಟರು ಯಾವುದೇ ಪ್ರಯೋಜನ ವಾಗಿರಲಿಲ್ಲ ಈಗಿನ ಶಾಸಕರಾದ ಸುನೀಲ್ ನಾಯ್ಕ ರವರು ಕಳೆದ ವರ್ಷ ನಮ್ಮ ಮನವಿಯನ್ನು ಸ್ವೀಕರಿಸಿ ಖದ್ದಾಗಿ ಒಂದು ಸ್ಥಳ ಪರಿಶೀಲಿಸಿ ಸೇತುವೆ ನಿರ್ಮಿಸಿ ಕೊಡುವ ಭರವಸೆಯನ್ನು ನೀಡಿರುತ್ತಾರೆ.ಆದರೆ ತಾತ್ಕಾಲಿಕವಾಗಿ ನಿರ್ಮಿಸಿದ ಕಟ್ಟಿಗೆ ಸಂಕವು ನಿನ್ನೆ ಸುರಿದ ಭಾರಿ ಮಳೆಗೆ ಕೊಚ್ಚಿಹೋಗಿರುತ್ತದೆ. ಇದರಿಂದ ಪ್ರತಿನಿತ್ಯ ಶಾಲೆಗೆ ಹೋಗುವ ವಿದ್ಯಾರ್ಥಿಗಳಿಗೆ ಪರ್ಯಾಯ ಮಾರ್ಗ ಇಲ್ಲದಿರುವುದರಿಂದ 2 ತಿಂಗಳು ಮನೆಯಲ್ಲಿ ಯೇ ಕೂರಬೇಕಾದ ಅನಿವಾರ್ಯತೆ ಉಂಟಾಗಿದೆ. ವಯಸ್ಸಾದವರಿಗೆ ಅನಾರೋಗ್ಯ ಉಂಟಾದಾಗ ಆಸ್ವತ್ರೆಗೆ ಹೋಗಲು ಕೂಡ ಸಾಧ್ಯವಾಗುತ್ತಿಲ್ಲ ಆದ್ದರಿಂದ ಶಾಸಕರು ಈ ಹಿಂದೆ ನೀಡಿದ ಭರವಸೆಯನ್ನು ಅತೀ ಶೀಘ್ರದಲ್ಲಿ ಬಗೆಹರಿಸಿಕೊಟ್ಟು ಹಲವಾರು ವರ್ಷಗಳ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕಾಗಿ ಶಾಸಕ ಸುನೀಲ್ ನಾಯ್ಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿ ಯವರಲ್ಲಿ ಊರಿನ ನಾಗಕರೀಕರು ವಿನಂತಿಸಿರುತ್ತಾರೆ.
More Stories
ಖಾಸಗಿ ಬಸ್ ಪಲ್ಟಿಯಾಗಿ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ, ೨ ಸಾವು
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ