May 2, 2024

Bhavana Tv

Its Your Channel

ಪರೇಶ ಮೇಸ್ತ ಪ್ರಕರಣ; ನಾಳೆ ಹೊನ್ನಾವರದಲ್ಲಿ ಜಿಲ್ಲಾ ಕಾಂಗ್ರೆಸ್‌ನಿoದ ಜನಜಾಗೃತಿ

ಹೊನ್ನಾವರ :ಪರೇಶ ಮೇಸ್ತ ಸಾವಿನ ಕುರಿತಂತೆ ಅನಗತ್ಯವಾಗಿ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಹೊರಿಸಿದ್ದ ಬಿ.ಜೆ.ಪಿ. ಪಕ್ಷ ಮತ್ತುಅವರ ನಾಯಕರ ನಿಲುವಿನ ಕುರಿತಂತೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ನೇತ್ರತ್ವದಲ್ಲಿ ದಿ.7 ಶುಕ್ರವಾರ ಮುಂಜಾನೆ 10 ಗಂಟೆಗೆ ಹೊನ್ನಾವರ ಪಟ್ಟಣದ ಶರಾವತಿ ವೃತ್ತದ ಬಳಿ ಜನಜಾಗೃತಿ ಸಭೆ ಏರ್ಪಡಿಸಲಾಗಿದೆ ಎಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್ ತೆಂಗೇರಿ ತಿಳಿಸಿದ್ದಾರೆ.
ಜನಜಾಗೃತಿ ಸಭೆಯಲ್ಲಿಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಐವಾನ್ ಡಿ’ಸೋಜಾ, ಮಾಜಿ ಸಚಿವ ಆರ್.ವಿ.ದೇಶಪಾಂಡೆ,ಮಾಜಿ ಶಾಸಕಿ ಶಾರದಾ ಶೆಟ್ಟಿ, ಮಾಜಿ ಶಾಸಕರಾದ ಮಂಕಾಳ ವೈದ್ಯ ಮತ್ತು ಸತೀಶ ಸೈಲ್,ಕೆ.ಪಿ.ಸಿ.ಸಿ.ಪದಾಧಿಕಾರಿಗಳು, ಜಿಲ್ಲಾಕಾಂಗ್ರೆಸ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ 14 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ವಿವಿಧ ವಿಭಾಗಗಳ ಜಿಲ್ಲಾ ಆಧ್ಯಕ್ಷರುಗಳು,ಪದಾಧಿಕಾರಿಗಳು ಮತ್ತು ಪಕ್ಷದ ಎಲ್ಲಾ ಸ್ತರದಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಾರಣ ಅತ್ಯಂತ ಮಹತ್ವಪೂರ್ಣವಾದ ಈ ಜನಜಾಗೃತಿ ಸಭೆಯಲ್ಲಿ ಪಕ್ಷದ ಕಾರ್ಯಕರ್ತರು,ಮುಖಂಡರು,ಸಾರ್ವಜನಿಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ಎನ್‌ತೆಂಗೇರಿ ಪತ್ರಿಕಾ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

error: