ಹೊನ್ನಾವರ ಪಟ್ಟಣದ ಪ್ರಭಾತನಗರದ ಮೂಡಗಣಪತಿ ದೇವಸ್ಥಾನಕ್ಕೆ ತೆರಳುವ ರಸ್ತೆಗೆ ೧೦ ಲಕ್ಷ ಮಂಜೂರಾಗಿದ್ದು, ಶಾಸಕ ದಿನಕರ ಶೆಟ್ಟಿ ಸೋಮವಾರ ಗುದ್ದಲಿಪೂಜೆ ನಡೆಸಿದರು.
ವಿಧಾನಪರಿಷತ್ ಸದಸ್ಯಗಣಪತಿ ಉಳ್ವೇಕರ್ ಪ್ರವೇಶಾಭಿವೃದ್ದಿನಿಧಿಯಿಂದ ೧೦ ಲಕ್ಷ ಮಂಜೂರಾದ ಕಾಂಕ್ರೀಟ್ ರಸ್ತೆ ಕಾಮಗಾರಿ ಆರಂಭಿಸಲು ಶಾಸಕರು ಚಾಲನೆ ನೀಡಿದರು.
ನಂತರ ಮಾತನಾಡಿ ವಿಧಾನಪರಿಷತ್ ಸದಸ್ಯರ ಪ್ರದೇಶಾಭಿವೃದ್ಧಿ ನಿಧಿಯಿಂದ ಕ್ಷೇತ್ರಕ್ಕೆ ಮಂಜೂರಾದ ೨೫ ಲಕ್ಷದಲ್ಲಿ ಈ ಭಾಗದ ಬಹು ಬೇಡಿಕೆಯಾದ ಮೂಡಗಣಪತಿ ದೇವಸ್ಥಾನಕ್ಕೆ ತೆರಳುವ ರಸ್ತೆಯು ಒಂದಾಗಿದೆ. ಜಿ.ಪಂ. ಇಲಾಖೆಯ ಅಧಿಕಾರಿಗಳು ಪ.ಪಂ.ಸದಸ್ಯರು ಕಾಮಗಾರಿ ಗುಣಮಟ್ಟದ ಬಗ್ಗೆ ಪರಿಶೀಲಿಸಬೇಕು. ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕುಮಟಾ ಪುರಸಭೆಗೆ ೧೦ ಕೋಟಿ, ಹೊನ್ನಾವರ ಪ.ಪಂ.೫ ಕೋಟಿ ಮಂಜೂರಾಗಿದೆ. ೧.೮೯ ಲಕ್ಷ ವೆಚ್ಚದ ರಸ್ತೆ ಕಾಮಗಾರಿಯ ಟೆಂಡರ ಆಗಿದೆ. ಒಂದು ವಾರದೊಳಗೆ ಕೆಲಸ ಆರಂಭವಾಗಲಿದೆ. ಮುಂದಿನ ಕೆಲ ದಿನದಲ್ಲಿ ಪಟ್ಟಣ ವ್ಯಾಪ್ತಿಯ ಎಲ್ಲಾ ರಸ್ತೆಗಳ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಡಲಧ್ಯಕ್ಷ ರಾಜೇಶ ಭಂಡಾರಿ, ಪ.ಪಂ. ಉಪಾಧ್ಯಕ್ಷೆ ನಿಶಾ ಶೇಟ್, ಸ್ಥಾಯಿಸಮಿತಿ ಅಧ್ಯಕ್ಷ ನಾಗರಾಜ ಭಟ್, ನಿಕಟಪೂರ್ವ ಅಧ್ಯಕ್ಷ ಶಿವರಾಜ ಮೇಸ್ತ,ಪ.ಪಂ.ಸದಸ್ಯರು,ಪ.ಪA.ಮುಖ್ಯಾಧಿಕಾರಿ ಪ್ರವೀಣಕುಮಾರ, ಸಿಪಿಐ ಶ್ರೀಧರ ಎಸ್.ಆರ್.ಪಿಎಸೈ ಮಹಾಂತೇಶ ನಾಯಕ, ಜಿ.ಪಂ.ಇAಜನಿಯರ್ ಪ್ರದೀಪ ಆಚಾರ್ಯ, ಬಿಜೆಪಿ ಮುಖಂಡರಾದ ಎಂ.ಎಸ್.ಹೆಗಡೆ, ಉಲ್ಲಾಸ ನಾಯ್ಕ, ದತ್ತಾತ್ರೇಯ ಮೇಸ್ತ, ಮತ್ತಿತರರು ಉಪಸ್ಥಿತರಿದ್ದರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್