![](https://kannada.bhavanatv.com/wp-content/uploads/2022/11/5acc3a47302ad.image-1.jpg?v=1668058950)
ಹೊನ್ನಾವರ ತಾಲೂಕಿನ ಗೇರುಸೊಪ್ಪಾದ ಮಾಸ್ತಿಮನೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಅಪಘಾತ ಮಾಡಿದ ಆರೋಪಿ ಕಾರ ಚಾಲಕ ಬೆಂಗಳೂರು ಮತ್ತಿಕೆರೆಯ ಕಾರ್ತಿಕ್ ಎಂ. ಟಿ. ಎಂಬುವವನಿಗೆ ಹೊನ್ನಾವರದ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಕುಮಾರ ಜೆ. ರವರು ವಿಚಾರಣೆ ನಡೆಸಿ ಆರೋಪಿಗೆ 3 ವರ್ಷ ಜೈಲು ಶಿಕ್ಷೆ ಮತ್ತು ರೂಪಾಯಿ 7,500/- ದಂಡ ವಿಧಿಸಿರುತ್ತಾರೆ.
ಆರೋಪಿಯು ದಿನಾಂಕ 03-04-2016 ರಂದು ಬೆಳಿಗ್ಗೆ 10-00 ಗಂಟೆ ಸಮಯಕ್ಕೆ ತನ್ನ ಕಾರನ್ನು ಗೇರುಸೊಪ್ಪ ಕಡೆಯಿಂದ ಸಾಗರ ಕಡೆಗೆ ಅತೀವೇಗ ಮತ್ತು ನಿಷ್ಕಾಳಜಿಯಿಂದ ಚಲಾಯಿಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎದುರಗಡೆಯಿಂದ ಅಂದರೆ ಸಾಗರ ಕಡೆಯಿಂದ ಹೊನ್ನಾವರ ಕಡೆಗೆ ಹೋಗುತ್ತಿದ್ದ ಮಾರುತಿ ಓಮಿನಿ ವಾಹನಕ್ಕೆ ಡಿಕ್ಕಿ ಹೊಡೆದು ಅಪಘಾತಪಡಿಸಿ ಮಾರುತಿ ಓಮಿನಿಯಲ್ಲಿ ಪ್ರಯಾಣಿಸುತ್ತಿದ್ದ 6 ಜನ ಪ್ರಯಾಣಿಕರಿಗೆ ಗಾಯನೋವುಂಟುಮಾಡಿದ್ದು ಮತ್ತು ಮಾರುತಿ ಓಮಿನಿ ಚಾಲಕ ಸಂಪತಕುಮಾರ ಇವರಿಗೆ ತೀವೃ ಸ್ವರೂಪದ ಗಾಯವುಂಟಾಗಿದ್ದು ನಂತರ ಅವರು ಆಸ್ಪತ್ರೆಯಲ್ಲಿ ಮೃತರಾಗಿದ್ದರು.
ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಹೊನ್ನಾವರ ಪೊಲೀಸ್ ಠಾಣೆಯ ಆಗಿನ ಪಿ. ಎಸ್. ಐ, ಗಣೇಶ ಬಿ. ಜೋಗಳೆಕರ ಮತ್ತು ಆಗಿನ ಹೊನ್ನಾವರದ ವೃತ್ತ ನಿರೀಕ್ಷಕರಾದ ಕೆ. ಕುಮಾರಸ್ವಾಮಿ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿಯನ್ನು ನ್ಯಾಯಲಯಕ್ಕೆ ಸಲ್ಲಿಸಿದ್ದರು. ದೂರುದಾರರ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಸಂಪದಾ ಅಶೋಕ ಗುನಗಾ ಈ ಪ್ರಕರಣದಲ್ಲಿ 10 ಜನ ಸಾಕ್ಷಿದಾರರನ್ನು ವಿಚಾರಿಸಿ ವಾದಿಸಿದ್ದರು.
![](https://kannada.bhavanatv.com/wp-content/uploads/2022/11/castle-rock-2-1024x120.jpg)
More Stories
ಹೊನ್ನಾವರದ ಎಸ್.ಡಿ.ಎಂ.ಪದವಿ ಕಾಲೇಜಿನ ಇಂಗ್ಲಿಷ್ ಲಿಟರರಿ ಕ್ಲಬ್ ಆಶ್ರಯದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಕೈಬರಹ ಪುಸ್ತಕ ‘ಬ್ಲೂಮ್’ ಬಿಡುಗಡೆ.
ಯಕ್ಷಗಾನ ಕಲಾವಿದ ಕಪ್ಪೆಕೆರೆ ಮಾಹಾದೇವ ಹೆಗಡೆ ನಿಧನ.
ಪ್ರತಿ ವರ್ಷ ಮಳೆಗಾಲ ಬಂತೆAದರೆ ಹೊನ್ನಾವರ ತಾಲೂಕಿನ ಮಂಕಿ ಪಟ್ಟಣ ಪಂಚಾಯತದ ಗುಂದ, ಚಿಟ್ಟೆಯಿತ್ಲ ಭಾಗಗಳ ಜನರಿಗೆ ಕಾಳಜಿ ಕೇಂದ್ರವೆ ಗತಿ,