
ಹೊನ್ನಾವರ: ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಮಧ್ಯಾಹ್ನದ ಬಿಸಿ ಊಟದ ಸಾಮಾಜಿಕ ಪರಿಶೋಧನೆಗೆ ಪೂರ್ವಭಾವಿಯಾಗಿ ಅಯ್ಕೆಗೊಂಡ ಭಟ್ಕಳ ಹೊನ್ನಾವರ ಹಾಗೂ ಕುಮಟಾ ತಾಲೂಕಿನ ಗ್ರಾಮ ಸಂಪನ್ಮೂಲ ವ್ಯಕ್ತಿಗಳಿಗೆ ಸೋಮವಾರ ಕಾಸರಗೋಡು ಇಕೋ ಪಾರ್ಕನಲ್ಲಿ ಒಂದು ದಿನ ತರಬೇತಿ ಕಾರ್ಯಕ್ರಮ ನಡೆಯಿತು.
ಹೊನ್ನಾವರ ಇಕೋ ಪಾರ್ಕಿನ ನಿಸರ್ಗದ ಮಡಿಲಲ್ಲಿ ಶಿಬಿರಾರ್ಥಿಗಳಿಗೆ ಯೋಜನೆ ಗುರಿ ಉದ್ದೇಶಗಳ ಜೊತೆ ಶಾಲೆಗಳಿಗೆ ಭೇಟಿ ನೀಡಿ ಪರಿಶೋಧನೆ ನಡೆಸುವ ಬಗ್ಗೆ ಪಾಲಕ ಪೋಷಕರು ಹಾಗೂ ಮಕ್ಕಳ ಜೊತೆ ಸಂವಾದ ನಡೆಸುವ ಬಗ್ಗೆ, ದಾಖಲೆ ಪರಿಶೀಲನೆ ನಡೆಸುವ ಬಗ್ಗೆ ಶಾಲಾ ಸಭೆಗಳ ಬಗ್ಗೆ ಸವಿಸ್ತಾರ ಮಾಹಿತಿ ತಿಳಿಸಲಾಯಿತು. ಜಿಲ್ಲೆ ಭಟ್ಕಳ, ಹೊನ್ನಾವರ ಹಾಗೂ ಕುಮಟಾ ತಾಲೂಕಿನ ಶಿಬಿರಾರ್ಥಿಗಳು ಇಲ್ಲಿ ಪಾಲ್ಗೊಂಡಿದ್ದರು. ಭಟ್ಕಳ ತಾಲೂಕು ಸಾಮಾಜಿಕ ಪರಿಶೋಧನೆ ಕಾರ್ಯಕ್ರಮ ವ್ಯವಸ್ಥಾಪಕ ಉಮೇಶ ಮುಂಡಳ್ಳಿ ಸಾಮಾಜಿಕ ಪರಿಶೋಧನೆ ನಡೆಸುವ ಪ್ರಕ್ರಿಯೆ ಬಗ್ಗೆ ಸವಿಸ್ತಾರವಾಗಿ ಮಾಹಿತಿ ತಿಳಿಸಿಕೊಟ್ಟರು. ಹೊನ್ನಾವರ ತಾಲೂಕು ಸಾಮಾಜಿಕ ಪರಿಶೋಧನೆ ಕಾರ್ಯಕ್ರಮ ವ್ಯವಸ್ಥಾಪಕ ಚಿದಾನಂದ ಗೌಡರವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕೊನೆಯದಾಗಿ ಕುಮಟಾ ತಾಲೂಕು ಸಾಮಾಜಿಕ ಪರಿಶೋಧನೆ ಕಾರ್ಯಕ್ರಮ ವ್ಯವಸ್ಥಾಪಕ ಹರೀಶರವರು ವಂದನಾರ್ಪಣೆ ಸಲ್ಲಿಸಿದರು.

More Stories
ಜಿಲ್ಲಾ ಮಟ್ಟದ ರಾಮಕ್ಷತ್ರೀಯ ಸಮಾಜದ ಹೊನಲು ಬೆಳಕಿನ ಹಗ್ಗಜಗ್ಗಾಟ ಪಂದ್ಯಾವಳಿ
ಕನ್ನಡ ಕಾರ್ತಿಕ 2024ರ ಅನುದಿನ ಅನುಸ್ಪಂದನ
ಹಿಂದುಳಿದ ನಾಯಕ ಬಿಕೆ ಹರಿಪ್ರಸಾದ್ ಅವರ ಬಗ್ಗೆ ನಾಲಗೆ ಹರಿಬಿಟ್ಟ ಹರೀಶ್ ಪೂಂಜಾ ಸಾರ್ವಜನಿಕ ಜೀವನದಲ್ಲಿರಲು ಯೋಗ್ಯರಲ್ಲ :ಮಂಜುನಾಥ ನಾಯ್ಕ