May 18, 2024

Bhavana Tv

Its Your Channel

ಹೊನ್ನಾವರದಲ್ಲಿ ಕನ್ನಡ ಭವನ ಮತ್ತು ಪತ್ರಿಕಾ ಭವನ ನಿರ್ಮಿಸುವಂತೆ ಮನವಿ

ಹೊನ್ನಾವರ: ಪಂಚರತ್ನ ರಥ ಯಾತ್ರೆ ಮೂಲಕ ಹೊನ್ನಾವರಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರಿಗೆ ಕನ್ನಡದ ಶಾಲೂ ಹಾಕಿ ಸ್ವಾಗತಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಮಂಜುನಾಥ್ ಗೌಡ ಅವರು ಹೊನ್ನಾವರದಲ್ಲಿ ಕನ್ನಡ ಭವನ ಮತ್ತು ಪತ್ರಿಕಾ ಭವನ ನಿರ್ಮಿಸುವಂತೆ ಮನವಿ ಮಾಡಿಕೊಂಡರು ಈ ಮನವಿಗೆ ಸ್ಪಂದಿಸಿದ ಮಾಜಿ ಮುಖ್ಯಮಂತ್ರಿಗಳಾದ ಎಚ್ ಡಿ ಕುಮಾರಸ್ವಾಮಿ ಅವರು ವೇದಿಕೆ ಮೇಲೆ ಸಾರ್ವಜನಿಕರು ಮತ್ತು ಮಾಧ್ಯಮದ ಎದುರು ಈ ಹಿಂದೆ ಸಿರ್ಸಿಯಲ್ಲಿ ನಮ್ಮ ಅವಧಿಯಲ್ಲಿ ಪತ್ರಿಕಾ ಭವನವನ್ನು ನಿರ್ಮಿಸಿದ್ದೇವೆ ಮುಂದಿನ ಬಾರಿ ಮುಖ್ಯಮಂತ್ರಿಯಾದರೆ ಹೊನ್ನಾವರದಲ್ಲಿ ಪತ್ರಿಕ ಭವನ ಮತ್ತು ಕನ್ನಡ ಭವನವನ್ನು ನಿರ್ಮಿಸಿ ಕೊಡುವುದಾಗಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ ಈ ಹೇಳಿಕೆಯನ್ನು ಕರವೇ ಅಧ್ಯಕ್ಷ ಮಂಜುನಾಥ್ ಗೌಡ ಅವರು ಅಭಿನಂದಿಸಿದ್ದಾರೆ.

error: