ಹೊನ್ನಾವರ ತಾಲೂಕಿನ ಹಿರೇಬೈಲ್ ಚಂದುಬೇಣದ ಶ್ರೀ ಚಂದ್ರಮೌಳೇಶ್ವರ, ಶ್ರೀ ಲಕ್ಷ್ಮೀನಾರಾಯಣ ದೇವಾಲಯದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಭಜನಾ ಸಂಕೀರ್ತನೆ ಸೇರಿದಂತೆ ವಿಶೇಷ ಪೂಜೆ ಪುನಸ್ಕಾರಗಳು ನಡೆದವು.
ಹರಿ ಮತ್ತು ಹರ ಇಬ್ಬರೂ ಮೇಳೈಸಿರುವ ಅಪರೂಪದ ಕ್ಷೇತ್ರ ಇದಾಗಿದ್ದು, ಇಲ್ಲಿ ಶ್ರೀ ಹರಿಯು ಲಕ್ಷ್ಮೀ ನಾರಾಯಣನಾಗಿ, ಹರನು ಚಂದ್ರಮೌಳೇಶ್ವರನಾಗಿ ಭಕ್ತರ ಕಷ್ಟಗಳನ್ನು ಕಳೆದು ಇಷ್ಟಾರ್ಥಗಳನ್ನು ಈಡೇರಿಸುತ್ತಾ ನೆಲೆಸಿದ್ದಾರೆ.
ಮಹಾಶಿವನನ್ನು ಪೂಜಿಸಿ ಆರಾಧಿಸುವ ಮಹಾಶಿವರಾತ್ರಿಯ ಪ್ರಯುಕ್ತ ಇಲ್ಲಿನ ಶ್ರೀ ಚಂದ್ರಮೌಳೇಶ್ವರನಿಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಕ್ಷೀರಾಭಿಷೇಕ, ಪಂಚಾಮೃತ ಅಭಿಷೇಕ ಸಹಿತ ವಿವಿಧ ಪೂಜಾ ವಿಧಿವಿಧಾನಗಳು ನಡೆದವು.
ಹಾಗೂ ವಿವಿಧ ಭಜನಾ ಮಂಡಳಿಗಳಿAದ ಹನ್ನೆರಡು ಗಂಟೆಗಳ ಕಾಲ ನಿರಂತರ ಭಜನಾ ಸಂಕೀರ್ತನೆ ನಡೆಯಿತು. ಅದರಂತೆಯೇ ಹರಡಸೆಯ ಭಾಸ್ಕರ ನಾಯ್ಕ್ ಸಂಗಡಿಗರಿAದ ನಡೆದ ಭಕ್ತಿ ಭಜನಾ ಸೇವೆಯಲ್ಲಿ, ಸುಜೇಂದ್ರ ಭಂಡಾರಿ, ಪ್ರತಿಭಾ ವಾದ್ಯವೃಂದದ ಮಾರುತಿ ನಾಯ್ಕ್ ಮುಂತಾದವರು ಭಾಗಿಯಾಗಿ ಶ್ರೀ ದೇವರ ಕೃಪೆಗೆ ಪಾತ್ರರಾದರು.
ಊರು ಹಾಗೂ ಪರ ಊರುಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಶಿವನ ಆರಾಧನೆ ಮಾಡಿ ತಮ್ಮ ತಮ್ಮ ಸೇವೆ ಸಲ್ಲಿಸಿ ಪುನೀತರಾದರು.
ವರದಿ: ನರಸಿಂಹ ನಾಯ್ಕ್ ಹರಡಸೆ
More Stories
ಡಾ. ವಿಠ್ಠಲ ಭಂಡಾರಿಯವರ ನೆನಪಿನ ಮೂರನೇ ವರ್ಷ ಸಹಯಾನದ ಅಂಗಳದಲ್ಲಿ
ಪಿಎಸೈ ವಿರುದ್ದ ಇಲಾಖೆಯ ಮೇಲಾಧಿಕಾರಿಗೆ ಹಾಗೂ ಜನಪ್ರತಿನಿಧಿಗಳಿಗೆ ಗ್ರಾ.ಪಂ. ಸದಸ್ಯನಿಂದ ದೂರು,
ಅರಣ್ಯ ಇಲಾಖೆಯ ನಿರ್ಲಕ್ಷದಿಂದ ಮೂಕ ಕಾಡು ಪ್ರಾಣಿ ಸಾವು