May 4, 2024

Bhavana Tv

Its Your Channel

ಶ್ರೀ ಲಕ್ಷ್ಮೀ ನರಸಿಂಹ ದೇವರು ಹಾಗೂ ಪರಿವಾರ ದೇವರುಗಳ ವಾರ್ಷಿಕ ವರ್ಧಂತಿ ಉತ್ಸವ

ಹೊನ್ನಾವರ ತಾಲೂಕಿನ ಹರಡಸೆಯ ಶ್ರೀ ಲಕ್ಷ್ಮೀ ನರಸಿಂಹ ದೇವರು ಹಾಗೂ ಪರಿವಾರ ದೇವರುಗಳ ವಾರ್ಷಿಕ ವರ್ಧಂತಿ ಉತ್ಸವವು ಶೃದ್ಧಾಭಕ್ತಿಯಿಂದ ನೆರವೇರಿತು. ಸಂಜೆ ವಿದ್ವಾನ್ ವಿಶ್ವೇಶ್ವರ ಭಟ್ ಅವರಿಂದ ರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.

ಎರಡು ದಿನಗಳ ಪರ್ಯಂತ ನಡೆದ ಈ ದೇವತಾ ಕಾರ್ಯದಲ್ಲಿ ಶ್ರೀ ನರಸಿಂಹ ಹವನ, ಆಂಜನೇಯ ಹವನ, ಹೊನ್ನಮಾಸ್ತಿ ದೇವಿಯ ಸ್ಥಾನ ಶುದ್ಧಿ, ಸಾಮೂಹಿಕ ಸತ್ಯನಾರಾಯಣ ಕಥೆ, ಅಭಿಷೇಕ, ಅನ್ನ ಸಂತರ್ಪಣೆ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ಎರಡನೆಯ ದಿನ ಸಂಜೆ ವಿದ್ವಾನ್ ವಿಶ್ವೇಶ್ವರ ಭಟ್ ಖರ್ವಾ ಇವರಿಂದ ಭಕ್ತಿ ಸಂಗೀತ ಕಾರ್ಯಕ್ರಮ ನಡೆಯಿತು.

ಈ ಎಲ್ಲ ಕಾರ್ಯಕ್ರಮಗಳಲ್ಲಿ ಊರಿನ ಹಾಗೂ ಪರಊರಿನ ಭಕ್ತಾದಿಗಳೆಲ್ಲ ಭಾಗವಹಿಸಿ ತಮ್ಮ ತಮ್ಮ ಶಕ್ತಿಯನುಸಾರ ಸೇವೆ ಸಲ್ಲಿಸಿ ಪುನೀತರಾದರು

ವರದಿ:ನರಸಿಂಹ ನಾಯ್ಕ್ ಹರಡಸೆ.

error: