April 25, 2024

Bhavana Tv

Its Your Channel

ಬೆಳೆ ವಿಮೆ ಅರ್ಜಿ ತಿರಸ್ಕೃತವಾಗಿದ್ದಕ್ಕೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ಕೋರಿರುವ ಕುರಿತು ಹೊನ್ನಾವರ ಪಟ್ಟಣದಲ್ಲಿ ಕೃಷಿ ನಿರ್ದೇಶಕರಿಂದ ಮಾಹಿತಿ.

ಹೊನ್ನಾವರ ; ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿಯಲ್ಲಿ ೨೦೨೧ ರ ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರದ ಮಾರ್ಗದರ್ಶನದಂತೆ ಮೊದಲನೆ ಬಾರಿ ಬೆಳೆ ಸಮೀಕ್ಷೆಯ ದತ್ತಾಂಶವನ್ನು ಬೆಳೆ ನೋಂದಾವಣಿಯಾದ ಪ್ರಸ್ತಾವನೆಗಳೊಂದಿಗೆ ಹೋಲಿಕೆ ಮಾಡಿ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಅಂತಿಮವಾಗಿ ಸಂಸ್ಥೆಯವರು ತಿರಸ್ಕರಿಸಿದ ಯಾದಿಯನ್ನು ಸಂಬ0ಧಪಟ್ಟ ಗ್ರಾಮ ಪಂಚಾಯತಿ ಹಾಗೂ ರೈತ ಸಂಪರ್ಕ ಕೇಂದ್ರಗಳ ಸೂಚನಾ ಫಲಕದಲ್ಲಿ ಲಗತ್ತಿಸಲಾಗಿದೆ.

ರೈತರು ಅವರ ವಿಮೆ ತಿರಸ್ಕೃತಗೊಂಡ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ತಿರಸ್ಕೃತ ಪರಿಶೀಲನೆಗಾಗಿ ಮರು ಅರ್ಜಿಯನ್ನು ಜೂನ್. ೧೫ ರೊಳಗೆ ಸಂಬAಧಪಟ್ಟ ರೈತ ಸಂಪರ್ಕ ಕೇಂದ್ರಗಳಲ್ಲಿ ಸಲ್ಲಿಸಬೇಕೆಂದು ಸಹಾಯಕ ಕೃಷಿ ನಿರ್ದೇಶಕರು, ಹೊನ್ನಾವರ ಇವರು ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

error: