ಹೊನ್ನಾವರ: ಇಲ್ಲಿನ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಕರ್ನಾಟಕ ಸರ್ಕಾರ,ಜಲಾನಯನ ಇಲಾಖೆ, ಸ್ಕೊಡವೇಸ್ ಸಂತೆಯಿAದ ರಚಿತವಾದ ಹಳದಿಪುರ ರೈತ ಉತ್ಪಾದಕ ಕಂಪನಿಯಿAದ ರೈತ ಮಹಿಳೆಯರಿಗೆ ರೈತ ಉತ್ಪಾದಕ ಕಂಪನಿಯ ಕುರಿತು ಮಾಹಿತಿ ನೀಡಲಾಯಿತು. ಸ್ಕೊಡವೇಸ್ ಸಂಸ್ಥೆಯ ಜಿಲ್ಲಾ ಸಂಯೋಜಕ ಗಂಗಾಧರ ನಾಯ್ಕ ಮಾತನಾಡಿ ರೈತ ಉತ್ಪಾದಕ ಕಂಪನಿಯು ಸರ್ಕಾರದ ಯೋಜನೆಯ ಅನ್ವಯ ರೈತರಿಂದ ರೈತರಿಗಾಗಿ, ರೈತರಿಗೋಸ್ಕರ ಪ್ರಾರಂಭವಾದ ಕಂಪನಿಯಾಗಿದೆ. ರೈತ ಉತ್ಪಾದಕ ಕಂಪನಿಯನ್ನು ಸರ್ಕಾರ ಸ್ಥಾಪನೆ ಮಾಡಿರುವ ಹಿನ್ನೆಲೆ, ಉದ್ದೇಶ, ಕಂಪನಿಯ ಸದಸ್ಯರಿಗೆ ಆಗುವ ಅನುಕೂಲಗಳ ಕುರಿತು ತಿಳಿಸಿಕೊಟ್ಟರು. ಈ ಸಂದರ್ಭದಲ್ಲಿ ಹಳದಿಪುರ ರೈತ ಉತ್ಪಾದಕ ಕಂಪನಿಯ ಮುಖ್ಯ ಕಾರ್ಯನಿರ್ವಾಹಕಿ ಆಶಾ ಭಟ್, ಸಂಜೀವಿನಿ ಸ್ವಸಹಾಯ ಸಂಘದ ಒಕ್ಕೂಟದ ಎಂ.ಪಿ.ಬಿ. ಹೇಮಾ ನಾಯ್ಕ, ಸ್ವಸಹಾಯ ಸಂಘದ ಸದಸ್ಯರು ಹಾಗೂ ಗ್ರಾಮದ ಮಹಿಳೆಯರು ಉಪಸ್ಥಿತರಿದ್ದರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್