May 12, 2024

Bhavana Tv

Its Your Channel

ಮೊದಲ ಪ್ರಯತ್ನದಲ್ಲೇ ತನ್ನ ಗುರಿ ಸಾಧಿಸಿದ ಮರಾಠಿ ಹುಡುಗ

ಹೊನ್ನಾವರ ;  ಮೊದಲ ಪ್ರಯತ್ನದಲ್ಲೇ ಕಠಿಣ ಪರೀಕ್ಷೆಗಳಲ್ಲಿ ಒಂದಾದ ಸಿಎ ಪರೀಕ್ಷೆಯನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆ ಹೊಂದಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಕಾಸಗೆರಿಯ ವಿಷ್ಣು ಮರಾಠಿ ಮತ್ತು ರಾಧಾ ಮರಾಠಿ ಅವರ ಮಗನಾದ ನಿತ್ಯಾನಂದ ವಿಷ್ಣು ಮರಾಠಿ ಈ ಸಾಧನೆ ಮಾಡಿದ ಛಲಗಾರ. ಕುಂಬ್ರಿ ಮರಾಠಿ ಸಮುದಾಯದ ಈತನು ಸಾಧಾರಣ ಸರ್ಕಾರಿ ಶಾಲಾ ಕಾಲೇಜಿನಲ್ಲಿ ಯಾವುದೇ ತರಬೇತಿ ಕೇಂದ್ರದ ಸಹಕಾರವಿಲ್ಲದೆ ಸ್ವ ಪ್ರಯತ್ನದಿಂದ ತನ್ನ ಪರೀಕ್ಷೆಯನ್ನು ಮುಗಿಸಿದ್ದಾನೆ. ಸಿಎ ಜಿ ಎಸ್ ಕಾಮತ್ & ಕಂಪನಿಯಲ್ಲಿ ಇಂರ‍್ನಸಿಪ್ ಮುಗಿಸಿ ಅಲ್ಲಿಯೂ ತನ್ನ ಹೆಸರನ್ನು ಸಾಧಿಸಿದ್ದಾನೆ.
 ಸಿಎ ಆಗಬೇಕೆಂಬುದು ಹಲವಾರು ವಿದ್ಯಾರ್ಥಿಗಳ ಕನಸು. ಸಾಮಾನ್ಯ ಕೃಷಿ ಕುಟುಂಬದ ಈ ಛಲಗಾರ ತನ್ನ ಕನಸನ್ನು ನನಸು ಮಾಡುವಲ್ಲಿ ಸಫಲಾನಗಿದ್ದಾನೆ. ಇದರೊಂದಿಗೆ ತನ್ನ ಸಾಧನೆಯನ್ನು ಮನೆಯವರಿಗೆ, ಗುರುವೃಂದಕ್ಕೆ, ಸಮುದಾಯಕ್ಕೆ ಕೀರ್ತಿ ತಂದಿದ್ದಾನೆ.
error: