ಕರ್ಕಿ: ಭಗವದ್ಗೀತಾ ಅಭಿಯಾನದ ಪ್ರಯುಕ್ತ ದಿನಾಂಕ: 1.12.2023 ರಂದು ಶ್ರೀ ಚೆನ್ನಕೇಶವ ಪ್ರೌಢಶಾಲೆ ಕರ್ಕಿಯಲ್ಲಿ ಭಗವದ್ಗೀತಾ ಶ್ಲೋಕ ಕೇಂದ್ರವನ್ನು ಉದ್ಘಾಟಿಸಲಾಯಿತು.
ಶ್ರೀಕೃಷ್ಣನ ಪೋಟೋ ಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖೇನ ಶ್ಲೋಕ ಕೇಂದ್ರವನ್ನು ಉದ್ಘಾಟಿಸಿದ ಶಾಲೆಯ ಮುಖ್ಯಾಧ್ಯಾಪಕರಾದ ಶ್ರೀ ಎಲ್. ಎಮ್.ಹೆಗಡೆಯವರು ಮಾತನಾಡಿ ಭಗವದ್ಗೀತಾ ಹಿಂದೂಗಳ ಪವಿತ್ರ ಗ್ರಂಥ ಅದನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ವ್ಯಕ್ತಿಗಳಾಗಿ ಎಂದು ಹೇಳಿದರು. ಮುಖ್ಯ ಅತಿಥಿಗಳಾದ ಶ್ರೀ ಎಸ್.ಎನ್.ಹೆಗಡೆಯವರು ಉತ್ತಮ ಸಂಸ್ಕಾರಕ್ಕಾಗಿ ಭಗವದ್ಗೀತಾ ಶ್ಲೋಕಗಳು ಅತ್ಯವಶ್ಯಕ ಎಂದರು.ಶಾಲಾ ಸಂಸ್ಕತ ಶಿಕ್ಷಕರಾದ ಹಾಗೂ ಶ್ಲೋಕ ಕೇಂದ್ರದ ಶಿಕ್ಷಕರಾದ ಶ್ರೀ ಸುಬ್ರಹ್ಮಣ್ಯ ಭಟ್ಟ ರವರು ಭಗವದ್ಗೀತೆಯ 10ನೇ ಅಧ್ಯಾಯದ ಮಹತ್ವವನ್ನು ತಿಳಿಸಿ ಶ್ಲೋಕಗಳನ್ನು ವಿದ್ಯಾರ್ಥಿಗಳಿಗೆ ಹೇಳಿಕೊಟ್ಟರು.
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್