ಭಟ್ಕಳ : ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಸಭಾಧ್ಯಕ್ಷ ಯುಟಿ ಖಾದರ್ ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯದ ಕಬಡ್ಡಿ ಪಂದ್ಯಾಟದಲ್ಲಿ 33 ವರ್ಷದ ಬಳಿಕ ದ್ವೀತಿಯ ಬಾರಿಗೆ ಚಿನ್ನದ ಪದಕ ಗಳಿಸಿ ಕರ್ನಾಟಕ ರಾಜ್ಯಕ್ಕೆ ಕಿರ್ತಿ ತಂದ ಹಿನ್ನೆಲೆಯಲ್ಲಿ ಕಬಡ್ಡಿ ಆಟಗಾರರನ್ನು ಅಭಿನಂದಿಸಿ ಶುಭಾಶಯ ಕೋರಿದರು.
ಸುವರ್ಣಸೌಧದಲ್ಲಿ ಸಭಾಧ್ಯಕ್ಷರು, ಕ್ರೀಡಾ ಸಚಿವರ ಉಪಸ್ಥಿತಿಯಲ್ಲಿ ಮಂಗಳೂರು ವಿಶ್ವವಿದ್ಯಾಯಲಯದ ಕಬಡ್ಡಿ ಆಟಗಾರರಿಗೆ 1 ಲಕ್ಷ ನಗದು ಹಾಗೂ ಸನ್ಮಾನ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಕ್ರೀಡಾಪಟುಗಳಿಗೆ ಸರಕಾರಿ ಸ್ವಾಮ್ಯದ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಸಹಬಾಗಿತ್ವದ ಕಂಪನಿಗಳಲ್ಲಿ ಉದ್ಯೋಗವಕಾಶ ಒದಗಿಸಿಕೊಡುವ ಬಗ್ಗೆ ಸಂಬ0ಧಪಟ್ಟವರಿಗೆ ಅಗತ್ಯ ಕ್ರಮ ಕೈಗೊಳ್ಳಲು ಸೂಚಿಸುವ ಬಗ್ಗೆ ಭರವಸೆಯನ್ನು ಇದೆ ಸಂದರ್ಭದಲ್ಲಿ ನೀಡಿದರು.
ಈ ತಂಡದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಜಿತಿನ್ ನಾಯ್ಕ, ರಜತ್ ನಾಯ್ಕ ಮತ್ತು ವಿನೋಧ ನಾಯ್ಕ ಸೇರಿದಂತೆ ಮೂವರು ಆಟಗಾರರು ಆಡುತ್ತಿರುವುವುದು ಹೆಮ್ಮೆಯ ವಿಚಾರವಾಗಿದೆ.
ಭಾವನಾ ಟಿವಿಗಾಗಿ ಈಶ್ವರ ನಾಯ್ಕ ಭಟ್ಕಳ
More Stories
ಜಿಲ್ಲಾಧಿಕಾರಿಗಳು ಗಣಿ ಅಧಿಕಾರಿಗಳು ದೊಡ್ಡಮಟ್ಟದ ಭೃಷ್ಟಚಾರ ನಡೆಸಿದ್ದಾರೆ, ಸಾಮಾಜಿಕ ಕಾರ್ಯಕರ್ತರಾದ ರಮೇಶ ನಾಯ್ಕ ತುಂಬೊಳ್ಳಿ ಗಂಭೀರ ಆರೋಪ.
ಸದ್ಗುರು ಭಗವಾನ್ ಶ್ರೀ ಶ್ರೀಧರ ಸ್ವಾಮಿಗಳ ಪಾದುಕಾ ಪ್ರತಿಷ್ಟಾಪನಾ ಸುರ್ಣ ಮಹೊತ್ಸವ
ಯಕ್ಷರಂಗದ ಅಪ್ರತಿಮ ಭಾಗವತ ದಿ. ಸುಬ್ರಮಣ್ಯ ಧಾರೇಶ್ವರ-ವಿ. ಕೆ. ಭಟ್