May 2, 2024

Bhavana Tv

Its Your Channel

ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ‘ಶರಾವತಿ ಕುಂಭ’-‘ಶರಾವತಿ ಆರತಿ’

ಹೊನ್ನಾವರ : ಶ್ರೀಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾ ಮಹೋತ್ಸವದ ನಿಮಿತ್ತ ಪವಿತ್ರ ಶರಾವತಿ ನದಿ ತಟದಲಿ ಪರಮಪೂಜ್ಯ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿಯವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ “ಶರಾವತಿ ಆರತಿ” ಕಾರ್ಯಕ್ರಮ ಯಶಸ್ವಿಯಾಗಿ ಸಂಪನ್ನಗೊ0ಡಿತು. ಜಾತ್ರಾ ಮಹೋತ್ಸವದ ಭಾಗವಾಗಿ ದಿನಾಂಕ 18/04/2024 ರಿಂದ 21/04/2024 ರವರೆಗೆ ಶರಾವತಿ ನದಿ ದಡದಲ್ಲಿ ‘ಶರಾವತಿ ಕುಂಭ’ವನ್ನು ಆಯೋಜಿಸಲಾಗಿದ್ದು, ಸಾಧು-ಸಂತರನ್ನೊಡಗೂಡಿ ಭಕ್ತಾದಿಗಳಿಗೆ ತ್ರಿಕಾಲ ಪುಣ್ಯಸ್ನಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಪುಣ್ಯನದಿ ಶರಾವತಿಯನ್ನು ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಪೂಜಿಸಿ ಗೌರವಿಸುವ ಉದ್ದೇಶದಿಂದ ಶರಾವತಿ ಕುಂಭದ ಸಂದರ್ಭದಲ್ಲಿ ಪ್ರತಿವರ್ಷವು ‘ಶರಾವತಿ ಆರತಿ’ಯನ್ನು ಆಯೋಜಿಸಿಕೊಂಡು ಬಂದಿದ್ದು ಈ ವರ್ಷವು ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಸಾನಿಧ್ಯದಲ್ಲಿ ಸಾಧು-ಸಂತರು, ಪುರೋಹಿತರು, ಭಕ್ತಾದಿಗಳು ಶರಾವತಿ ಮಾತೆಗೆ ಬಾಗಿನ ಅರ್ಪಿಸಿ, ಆರತಿ ಬೆಳಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

error: