May 19, 2024

Bhavana Tv

Its Your Channel

ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ

ಹೊನ್ನಾವರ ತಾಲೂಕಿನ ಸಾಲ್ಕೋಡ್ ಗ್ರಾಮದ ಮುಲ್ಲೆಮಕ್ಕಿ ಸಮೀಪ ವಿದ್ಯುತ್ ಲೈನ್ ಕಿಡಿಯಿಂದ ತಗುಲಿದ ಬೆಂಕಿ ತೋಟಕ್ಕೂ ವ್ಯಾಪಿಸಿ ಹಾನಿ ಉಂಟಾದ ಘಟನೆ ಸಂಭವಿಸಿದೆ.

ಗ್ರಾ.ಪಂ. ಉಪಾಧ್ಯಕ್ಷ ಬಾಲಚಂದ್ರ ನಾಯ್ಕ ಇವರ ತೋಟದ ಸಮೀಪದ ಅರಣ್ಯ ಪ್ರದೇಶ ಭಾಗದಲ್ಲಿ ವಿದ್ಯುತ್ ಲೈನ್ ಹಾದು ಹೋಗಿತ್ತು. ಮಧ್ಯಾಹ್ನದ ಸಮಯದಲ್ಲಿ ವಿದ್ಯುತ್ ಲೈನ್ ಕೆಳಗೆ, ಏಕಾಏಕಿ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಗುಡ್ಡಕ್ಕೆ ವ್ಯಾಪ್ತಿಸಿತು. ಸಾರ್ವಜನಿಕರು ಅಗ್ನಿಶಾಮಕ ಇಲಾಖೆ ಮಾಹಿತಿ ನೀಡಿ ಬೆಂಕಿ ನಂದಿಸಲು ಹರಸಾಹಸಪಟ್ಟರು. 

ಈ ವೇಳೆ ಬಾಲಚಂದ್ರ ನಾಯ್ಕ ಇವರ ತೋಟಕ್ಕೂ ಬೆಂಕಿ ವ್ಯಾಪಿಸಿ ನೂರಕ್ಕೂ ಅಧಿಕ ಅಡಿಕೆ, ತೆಂಗು, ಬಾಳೆಗಿಡ ಹಾಗೂ ನೀರಾವರಿಗೆ ಹಾಕಿದ ಪೈಪಲೈನ್ ಸುಟ್ಟು ಕರಕಲಾಗಿದೆ. ಹೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನನಿಂದ ಪ್ರತಿಬಾರಿಯು ಇಂತಹ ಅಗ್ನಿ ಅವಘಡ ಸಂಭವಿಸುತ್ತಾ ಇದ್ದ, ಈ ಬಾರಿ ತೋಟದವರಿಗೂ ವ್ಯಾಪಿಸಿದೆ. ಹೆಸ್ಕಾಂ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

error: