ಕಾರವಾರ: ಸಾಕಷ್ಟು ಕುತೂಹಲ ಮೂಡಿಸಿದ್ದ ವಿಧಾನಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮಣ್ಣ ನಾಯ್ಕ ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದರು.
ನಗರದ ಮಿತ್ರ ಸಮಾಜ ಮೈದಾನದಲ್ಲಿ ಶಾಸಕ, ಮಾಜಿ ಸಚಿವ ಆರ್ ವಿ ದೇಶಪಾಂಡೆ ನೇತೃತ್ವದಲ್ಲಿ ಸಭೆಯನ್ನ ನಡೆಸಿದ್ದು ಈ ವೇಳೆ ಮಾಜಿ ಎಂಎಲ್ಸಿ ಎಸ್.ಎಲ್.ಘೋಟ್ನೇಕರ್, ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹಾಗೂ ಮಾಜಿ ಶಾಸಕರುಗಳಾದ ಸತೀಶ್ ಸೈಲ್, ಶಾರದಾ ಶೆಟ್ಟಿ, ಮಂಕಾಳು ವೈದ್ಯ ಹಾಗೂ ಮಧು ಬಂಗಾರಪ್ಪ ಉಪಸ್ಥಿತರಿದ್ದರು.
ನಂತರ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅಭ್ಯರ್ಥಿ ಭೀಮಣ್ಣ ನಾಯ್ಕ ಜಿಲ್ಲಾ ಚುನಾವಣಾಧಿಕಾರಿ ಮುಲ್ಲೈ ಮುಗಿಲನ್ ಅವರಿಗೆ ನಾಮಪತ್ರವನ್ನ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ಅವಧಿ ಮುಗಿದರೂ ಸಹ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಯನ್ನ ನಡೆಸದೇ ಬಿಜೆಪಿ ಸರ್ಕಾರ ಅನ್ಯಾಯ ಮಾಡುತ್ತಿದೆ. ಕಾಂಗ್ರೆಸ್ಗೆ ಹೆಚ್ಚಿನ ಬೆಂಬಲ ಸಿಗುತ್ತದೆ ಎನ್ನುವ ಕಾರಣಕ್ಕೆ ಚುನಾವಣೆಯನ್ನ ಮುಂದೂಡುತ್ತಿದೆ. ಮುಂದಿನ ದಿನಗಳಲ್ಲಿ ಈ ರೀತಿ ಅನ್ಯಾಯ ಆಗದ ರೀತಿಯಲ್ಲಿ ಸದಸ್ಯರ ಬೆಂಬಲಕ್ಕೆ ನಿಲ್ಲುವುದಾಗಿ ಭೀಮಣ್ಣ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
More Stories
ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ
ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ