ಕಾರವಾರ: ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ ೬೬ರ ಬಿಣಗಾ ಘಟ್ಟದ ಬಳಿ ಮಣ್ಣು ತುಂಬಿಕೊoಡು ಹೊರಟಿದ್ದ ಟಿಪ್ಪರ್ ಪಲ್ಟಿಯಾಗಿ ಚಾಲಕ ಗಾಯಗೊಂಡ ಘಟನೆ ನಡೆದಿದೆ.
ಕಾರವಾರದಿಂದ ಅಂಕೋಲಾದತ್ತ ಸಾಗುತ್ತಿದ್ದ ಟಿಪ್ಪರ್ ಘಟ್ಟದ ತಿರುವಿನಲ್ಲಿ ಚಲಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಚಾಲಕನ ತಲೆಗೆ ತೀವ್ರ ಹೊಡೆತ ಬಿದ್ದಿದ್ದು ಗಂಭೀರವಾಗಿ ಗಾಯಗೊಂಡಿದ್ದ.
ಈ ವೇಳೆ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ರವಾನಿಸಲು ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನ ಸವಾರರು ನೆರವು ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ೧೧೨ ಇಆರ್ಎಸ್ಎಸ್ ತುರ್ತು ಸೇವಾ ಪೊಲೀಸ್ ಸಿಬ್ಬಂದಿ ಅಂಬ್ಯುಲೆನ್ಸ್ ಕರೆಸಿದ್ದು ಬಳಿಕ ಗಾಯಾಳುವನ್ನು ಕಾರವಾರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಟಿಪ್ಪರ್ ರಸ್ತೆ ಪಕ್ಕಕ್ಕೆ ಉರುಳಿದ್ದ ಪರಿಣಾಮ ಹೆದ್ದಾರಿ ಸಂಚಾರಕ್ಕೆ ಯಾವುದೇ ಅಡೆತಡೆ ಉಂಟಾಗಿಲ್ಲವಾಗಿದ್ದು ಅಪಘಾತ ಸಂಬAಧ ಕಾರವಾರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ
ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ