ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ರವಿವಾರ ಉತ್ತರಕನ್ನಡ ಜಿಲ್ಲಾ ಪೊಲೀಸರ ವಾರ್ಷಿಕ ಕ್ರೀಡಾಕೂಟ ನಡೆಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನಾ.ಡಿ.ಪೆನ್ನೇಕರ್ ಅಧ್ಯಕ್ಷತೆ ವಹಿಸಿದ್ದು, ಆರ್ಮಿ ಕ್ರೀಡಾ ತರಬೇತುದಾರ ಕಾಶೀನಾಥ ನಾಯ್ಕ ಉದ್ಘಾಟಕರಾಗಿ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಕ್ರೀಡಾ ಜ್ಯೋತಿಯನ್ನ ಹಸ್ತಾಂತರಿಸುವ ಮೂಲಕ ವಿದ್ಯುಕ್ತ ಚಾಲನೆ ನೀಡಿದ್ದು ಬಳಿಕ ಕಾಶೀನಾಥ ನಾಯ್ಕ ಜಾವೆಲಿನ್ ಎಸೆಯುವ ಮೂಲಕ ಕ್ರೀಡಾಕೂಟವನ್ನ ವಿನೂತನವಾಗಿ ಉದ್ಘಾಟಿಸಿದರು. ಈ ವೇಳೆ ಕ್ರೀಡಾಪಟುಗಳನ್ನ ಉದ್ದೇಶಿಸಿ ಮಾತನಾಡಿದ ಕಾಶೀನಾಥ ಯಾವುದೇ ಕ್ಷೇತ್ರದಲ್ಲಾದರೂ ನಾವು ನಮ್ಮ ಸಂಪೂರ್ಣ ಪರಿಶ್ರಮವನ್ನ ಹಾಕುವುದು ಅತ್ಯಗತ್ಯವಾಗಿದೆ. ನಾವು ಎಷ್ಟು ಉತ್ಸಾಹದಿಂದ ಪಾಲ್ಗೊಳ್ಳುತ್ತೇವೆಯೋ ಅಷ್ಟು ಸಾಧನೆ ಮಾಡಲು ಸಹಕಾರಿಯಾಗುತ್ತದೆ ಎಂದರು. ಬಳಿಕ ಕ್ರೀಡಾಪಟುಗಳಿಗೆ ಕ್ರೀಡೆಯಲ್ಲಿ ಸ್ಪರ್ಧಿಸುವ ಕುರಿತು ಕೆಲವೊಂದು ಸಲಹೆಗಳನ್ನ ಸಹ ನೀಡಿದರು. ಕ್ರೀಡಾಕೂಟದಲ್ಲಿ ೮೦೦ ಮೀಟರ್, ೪೦೦ ಮೀಟರ್ ಓಟ, ಜಾವೆಲಿನ್ ಥ್ರೋ ಸೇರಿದಂತೆ ವೈಯಕ್ತಿಕ ಸ್ಪರ್ಧೆಗಳು ಜರುಗಿದ್ದು ಮೂರು ದಿನಗಳ ಕಾಲ ವಿವಿಧ ಕ್ರೀಡಾ ಸ್ಪರ್ಧೆಗಳು ಜರುಗಲಿವೆ. ಇದೇ ವೇಳೆ ಕಾರ್ಯಕ್ರಮದಲ್ಲಿ ಕ್ರೀಡಾ ತರಬೇತುದಾರ ಕಾಶೀನಾಥ ನಾಯ್ಕರನ್ನ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಸನ್ಮಾನಿಸಿ ಗೌರವಿಸಿದ್ದು ಬಳಿಕ ಪೊಲೀಸ್ ತಂಡಗಳಿoದ ಆಕರ್ಷಕ ಪಥಸಂಚಲನವನ್ನ ನಡೆಸಲಾಯಿತು.
More Stories
ಮಹಿಳೆಯರ ಮೇಲೆ ದೌರ್ಜನ್ಯ, ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ
ಕಾಗೇರಿ ಕಣ್ಣಲ್ಲಿ ರಕ್ತವಿಲ್ಲ, ಬಡಜನರ ಕಾಳಜಿ ಇಲ್ಲ: ಮಾರ್ಗರೇಟ್ ಆಳ್ವಾ ವಾಗ್ದಾಳಿ
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ