ಕಾರವಾರ : ಮದುವೆಯಾಗಿ 19 ದಿನಗಳಲ್ಲಿ ನವವಿವಾಹಿತೆಯೋರ್ವಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಕಾರವಾರ ನಗರದಲ್ಲಿ ನಡೆದಿದೆ.
ಮೇ 10ರಂದು ಕಿನ್ನರದ ಸನಾ ಮಾಂಜ್ರೇಕರ್ ಕಡವಾಡ ಗ್ರಾಮದ ನಿವಾಸಿ ಸ್ವಪ್ನಿಲ್ ಮಾಂಜ್ರೇಕರ್ ಎಂಬಾತನೊAದಿಗೆ ವಿವಾಹವಾಗಿತ್ತು. ಎಂಟು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದರಿAದ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖಳಾಗಿದ್ದಳು. ಶನಿವಾರ ಮಧ್ಯಾಹ್ನ ಮತ್ತೆ ಜ್ವರ, ತಲೆನೋವು ಕಾಣಿಸಿಕೊಂಡಿದ್ದರಿAದ ನಗರದ ಕಾಜುಭಾಗ ದಲ್ಲಿರುವ ಖಾಸಗಿ ಆಸ್ಪತ್ರೆ ಸನಾಳನ್ನ ಮನೆಯವರು ದಾಖಲಿಸಿದ್ದರು.
ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿ ಎಡವಟ್ಟು ಮಾಡಿದ್ದರಿಂದ ಕೆಲವೇ ಹೊತ್ತಿನಲ್ಲಿ ಆಕೆಗೆ ಹೊಟ್ಟೆಉರಿ ಕಾಣಿಸಿಕೊಂಡಿದ್ದು ಉಸಿರಾಟದಲ್ಲೂ ಏರುಪೇರಾಗಿದೆ. ತಕ್ಷಣ ಪರಿಶೀಲಿಸಿದ ಆಸ್ಪತ್ರೆ ಸಿಬ್ಬಂದಿ ತಮ್ಮ ಆಸ್ಪತ್ರೆಯಲ್ಲಿ ಐಸಿಯು ವ್ಯವಸ್ಥೆ ಇಲ್ಲದ ಕಾರಣಕ್ಕೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯುವAತೆ ತಿಳಿಸಿದ್ದಾರೆ. ಅಂಬ್ಯುಲೆನ್ಸ್ ಮೂಲಕ ಸನಾಳನ್ನ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಆದ್ರೆ ಅಲ್ಲಿನ ವೈದ್ಯರು ಚಿಕಿತ್ಸೆ ನೀಡಲು ಪ್ರಯತ್ನಿಸಿದರಾದರೂ ಪ್ರಯೋಜನವಾಗದೇ ಸನಾ ಕೊನೆಯುಸಿರೆಳೆದಿದ್ದಾಳೆ.
ಈ ಬಗ್ಗೆ ಸಂಬAಧಿಕರು ಪೊಲೀಸ್ ಠಾಣೆಗೆ ತೆರಳಿ ನ್ಯಾಯಕ್ಕಾಗಿ ಒತ್ತಾಯಿಸಿದ್ದಲ್ಲದೇ ವೈದ್ಯರ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
More Stories
ಕಾಂಗ್ರೆಸ್ ಅಭ್ಯರ್ಥಿ ವಿರುದ್ಧದ ಬಿಜೆಪಿಗರ ಆರೋಪ ಅಪ್ಪಟ ಸುಳ್ಳು: ಶಂಭು ಶೆಟ್ಟಿ
ಎಮ್ ಇ ಎಸ್ ಹೋರಾಟ ಸಮರ್ಥಿಸಿಕೊಂಡ ಕಾಂಗ್ರೆಸ್ ಅಭ್ಯರ್ಥಿ ಅಂಜಲಿ ಹೇಳಿಕೆಯನ್ನು ಕರುನಾಡ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಎನ್. ದತ್ತಾ, ಖಂಡಿಸಿದ್ದಾರೆ.
ಉರಿ ಬಿಸಿಲಲ್ಲೂ ಉತ್ಸಾಹ ಕಳೆದುಕೊಳ್ಳದ ಕಾಂಗ್ರೆಸ್ ಕಾರ್ಯಕರ್ತರು.ಭರ್ಜರಿ ರೋಡ್ ಶೋ ಮೂಲಕ ನಾಮಪತ್ರ ಸಲ್ಲಿಸಿದ ಡಾ.ಅಂಜಲಿ ನಿಂಬಾಳ್ಕರ್.