April 25, 2024

Bhavana Tv

Its Your Channel

ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಬೃಹತ್ ಮೆರವಣಿಗೆ

ಕಾರವಾರ:- ವಿಶ್ವ ಮೀನುಗಾರಿಕೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಮೀನುಗಾರರ ವಿವಿಧ ಸಂಘಟನೆಗಳ ಆಶ್ರಯದಲ್ಲಿ ಬೃಹತ್ ಮೆರವಣಿಗೆ ನಡೆಯಿತು

ಎಮ್ ಎಲ್ ಸಿ ಗಣಪತಿ ಉಳ್ವೇಕರ , ರಾಷ್ಟ್ರೀಯ ಮೀನುಗಾರರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಚಂದ್ರಕಾoತ ಕೊಚರೇಕರ್, ಜಿಲ್ಲಾಧ್ಯಕ್ಷ ಗಣಪತಿ ಮಾಂಗ್ರೆ, ಜಿಲ್ಲಾ ಫೆಡರೇಶನ್ ಅಧ್ಯಕ್ಷ ರಾಜು ತಾಂಡೇಲ, ಮೀನುಗಾರರ ವಿವಿಧ ಸಂಘಟನೆಗಳ ವೇದಿಕೆ ಸಂಚಾಲಕ ವಿಕಾಸ್ ತಾಂಡೇಲ, ಕಡಲ ವಿಜ್ಞಾನಿ ಪ್ರಕಾಶ ಮೇಸ್ತ, ಕರಾವಳಿ ಮೀನುಗಾರ ಕಾರ್ಮಿಕರ ಸಂಘದ ರಾಜೇಶ ತಾಂಡೇಲ, ಗಣಪತಿ ತಾಂಡೇಲ, ರಾಜು, ಅಂಕೋಲಾದ ರಾಜು ಹರಿಕಂತ್ರ, ಪತ್ರಕರ್ತ ಟಿ.ಬಿ. ಹರಿಕಂತ್ರ, ಇನ್ನು ಮುಂತಾದ ಪ್ರಮುಖರು ಮೆರವಣಿಗೆಯ ನೇತ್ರತ್ವ ವಹಿಸಿದ್ದರು. ಮೆರವಣಿಗೆಯ ನಂತರ ರಾಷ್ಟ್ರೀಯ ಮೀನುಗಾರರ ಸಂಘಟನೆಯ ರಾಜ್ಯ ಕಾರ್ಯದರ್ಶಿ ಚಂದ್ರಕಾAತ ಕೊಚರೇಕರ್ ರವರು ಮುಖ್ಯಮಂತ್ರಿ ಮಂತ್ರಿಗಳಿಗೆ ಮತ್ತು ಗ್ರಹ ಸಚಿವರಿಗೆ ಮೀನುಗಾರರ ಪ್ರಮುಖ ಐದು ಬೇಡಿಕೆಗಳ ಈಡೇರಿಕೆಗಾಗಿ ಅಗ್ರಹ ಪಡಿಸುವ ವಿವಿಧ ಮನವಿಗಳನ್ನು ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ ರವರಿಗೆ ಸಲ್ಲಿಸಿ ಸರಕಾರದ ಗಮನ ಸೆಳೆಯುವಂತೆ ಕೋರಿದರು.

error: