March 23, 2024

Bhavana Tv

Its Your Channel

ನ್ಯಾಯಾಧೀಶರಿಗೆ ಕನ್ನಡ ಪ್ರಶಸ್ತಿ

ಕಾರವಾರ: – ಕನ್ನಡ ಅಭಿವೃದ್ಧಿ ಪ್ರಾಧಿಕಾರವು ನ್ಯಾಯಾಂಗದಲ್ಲಿ ಕನ್ನಡ ಪ್ರಶಸ್ತಿ ಘೋಷಣೆ ಮಾಡಿದ್ದು, 90 ನ್ಯಾಯಾಧೀಶರು ಸೇರಿ 120 ಮಂದಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡದಲ್ಲೇ ತೀರ್ಪನ್ನು ನೀಡುವ ನ್ಯಾಯಾಧೀಶರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪ್ರಶಸ್ತಿ ನೀಡಲಾಗುತ್ತಿದ್ದು, ನ್ಯಾಯಾಲಯಗಳಲ್ಲಿ ಕನ್ನಡದಲ್ಲಿ ಅರ್ಜಿ ಸಲ್ಲಿಸುವ, ವಾದ ಮಂಡಿಸುವ ವಕೀಲರನ್ನು ಗುರುತಿಸಿ ಗೌರವಿಸಲಾಗುತ್ತದೆ. ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಕಾರವಾರದ ಹಿರಿಯ ಸಿವಿಲ್ ನ್ಯಾಯಾಧೀಶೆ ರೇಣುಕಾ ದೇವಿದಾಸ ರಾಯ್ಕರ್, ಮತ್ತು ವಕೀಲೆ ತನುಜಾ ಬಿ, ಹೊಸಪಟಣ ಸೇರಿದ್ದಾರೆ.

error: