ಕುಮಟಾ : ಹೊನ್ನಾವರ ತಾಲೂಕಿನ ಇಡಗುಂಜಿ ಹಾಗೂ ಸಾಲ್ಕೋಡ ಎರಡೂ ಪಂಚಾಯತಗಳ ಪಿ.ಡಿ.ಓ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ ಶೆಟ್ಟಿ ಅವರು ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ .
ಅವರು ಶುಕ್ರವಾರ ಮಧ್ಯಾಹ್ನ ಕಾರವಾರದಲ್ಲಿ ನಡೆಯಲಿದ್ದ ಕಂಪ್ಯೂಟರ್ ಪರೀಕ್ಷೆಗೆ ಹಾಜರಾಗಲು ಬೈಕ್ನಲ್ಲಿ ಹೋಗುತ್ತಿರುವಾಗ ದುಂಡಕುಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಕಸ್ಮಿಕವಾಗಿ ಬೈಕ್ನ ನಿಯಂತ್ರಣ ತಪ್ಪಿ ಹೆದ್ದಾರಿಯ ಪಕ್ಕದ ಕಂದಕಕ್ಕೆ ಬಿದ್ದಿದ್ದಾರೆ . ಕಂದಕದಲ್ಲಿದ್ದ ಕಲ್ಲು ಪ್ರಶಾಂತ ಅವರ ತಲೆ ಭಾಗಕ್ಕೆ ತೀವ್ರತರಹದ ಪೆಟ್ಟು ತಗಲುವಂತೆ ಮಾಡಿದೆ . ಇದರಿಂದ ಅಧಿಕ ರಕ್ತಸ್ರಾವ ಉಂಟಾಗಿದೆ . ಸ್ಥಳೀಯರು ತಕ್ಷಣ ತಾಲೂಕು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ . ಈ ಬಗ್ಗೆ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!