ನಟರಾಜ ಗದ್ದೆಮನೆ ಕುಮಟಾ
ಕುಮಟಾ : ಕುಮಟಾ ಕಡೆಯಿಂದ ಕಾರವಾರ ಕಡೆಗೆ ತೆರಳುತ್ತಿದ್ದ ಅಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿ ಯಾದ ಘಟನೆ ಕುಮಟಾ ತಾಲೂಕಿನ ಖೈರೇ ಕ್ರಾಸ್ ಸಮೀಪ ಸಂಭವಿಸಿದ್ದು ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ.
ಅಂಬುಲೆನ್ಸ್ ವೀಲ್ ಜಾಂಮ್ ಆದ ಕಾರಣದಿಂದಾಗಿ ಅಂಬುಲೆನ್ಸ್ ಚಾಲಕನ ನಿಯಂತ್ರಣಕ್ಕೆ ಸಿಗದ ಪಲ್ಟಿಯಾಗಿದೆ ಎನ್ನಲಾಗಿದೆ. ಪ್ರತ್ಯಕ್ಷದರ್ಶಿಗಳು ಈ ಬಗ್ಗೆ ಮಾಹಿತಿ ನೀಡಿದ್ದು ಅಂಬುಲೆನ್ಸ್ ಕೊರತೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು ಎಂದಿದ್ದಾರೆ.
ಕಾರವಾರದ ಮದರ್ ತೆರೇಸಾ ಆಸ್ಪತ್ರೆಗೆ ಸಂಬAಧಿಸಿದ ಆಂಬುಲೆನ್ಸ್ ಇದಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಆಂಬುಲೆನ್ಸ್ ನಲ್ಲಿ ಯಾವುದೇ ರೋಗಿಗಳು ಇಲ್ಲದ ಕಾರಣ ಯಾವುದೇ ದೊಡ್ಡಮಟ್ಟದ ಅನಾಹುತ ಸಂಭವಿಸಿಲ್ಲ
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ