ಕುಮಟಾ: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ನಮ್ಮ ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸಿರುವುದು ನನಗೂ ಬೇಸರ ತಂದಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.
ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ನಡೆದ ಯೋಜನಾ ಮಟ್ಟದ ಪೋಷಣಾ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಅವರು ಮಾತನಾಡಿದರು. ನಮ್ಮ ಅಂಗನವಾಡಿ ಕಾರ್ಯಕರ್ತೆಯರಿಂದ ಸರ್ಕಾರ ಎಲ್ಲ ಕೆಲಸವನ್ನು ಮಾಡಿಸಿಕೊಳ್ಳುತ್ತದೆ. ಆದರೆ ಅವರಿಗೆ ನೀಡಲಾಗುವ ಕಡಿಮೆ ಗೌರವ ಧನವನ್ನು ಕೂಡ ಸಮಯಕ್ಕೆ ಸರಿಯಾಗಿ ನೀಡುವುದಿಲ್ಲ. ಇದನ್ನು ನೋಡಿದಾಗ ನಮ್ಮ ಸರ್ಕಾರ ಅಂಗನವಾಡಿ ಕಾರ್ಯಕರ್ತೆಯ ಬಗ್ಗೆ ನಿರ್ಲಕ್ಷ್ಯ ವಹಿಸುತ್ತದೆ ಎಂದು ನನಗೂ ಅನಿಸುತ್ತದೆ. ಆದರೆ ಈ ಬಗ್ಗೆ ನಾನು ಮಾತನಾಡಿದರೇ ಅದು ಉಲ್ಟಾ ಆಗುತ್ತದೆ. ಅದಕ್ಕೆ ಸುಮ್ಮನಿರಬೇಕಾಗಿದೆ. ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿ ಎಲ್ಲ ಸರಿ ಮಾಡುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಅಪೌಷ್ಠಿಕ ಮಕ್ಕಳಿಗೆ ಪೌಷ್ಠಿಕ ಆಹಾರ ನೀಡುವ ಯೋಜನೆ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಸಹಾಯಕಾರಿಯಾಗಿದೆ. ನಮ್ಮ ಮಹಿಳೆಯರ ಕೈಗುಣ ಚೆನ್ನಾಗಿದೆ ಎಂಬುದಕ್ಕೆ ಇಷ್ಟೆಲ್ಲ ತಿಂಡಿ-ತಿನಿಸುಗಳನ್ನು ನೋಡಿದರೆ ತಿಳಿಯುತ್ತದೆ ಎಂದರು.
ತಾಲೂಕು ಪಂಚಾಯತ್ ಇಒ ಸಿ ಟಿ ನಾಯ್ಕ ಮತ್ತು ಆರೋಗ್ಯಾಧಿಕಾರಿ ಡಾ. ಆಜ್ಞಾ ನಾಯಕ ಮಾತನಾಡಿದರು.
ಈ ಸಂದರ್ಭದಲ್ಲಿ ೪ ಅಂಗವಿಕಲ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಮತ್ತು ಇಬ್ಬರು ಫಲಾನುಭವಿಗಳಿಗೆ ಹೋಲಿಗೆ ಮಷೀನ್ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಡಿಪಿಒ ನಾಗರತ್ನ ನಾಯಕ ವಹಿಸಿದ್ದರು. ಜಿಪಂ ಎಇಇ ಆರ್ ಜಿ ಗುನಗಿ, ಅಂಗನವಾಡಿ ಕಾರ್ಯಕರ್ತೆಯರು ಇದ್ದರು.
More Stories
ನಿಶ್ಚಲಾನಂದನಾಥ ಸ್ವಾಮೀಜಿಯವರ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ
ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿಯವರು ಮರಳಿ ಕಾಂಗ್ರೆಸ್ಗೆ ಸೇರ್ಪಡೆ.
ಅನಾರೋಗ್ಯವಿದ್ದರೂ ಪ್ರಚಾರ ಬಿಡದ ಡಾ.ಅಂಜಲಿ!