ಕುಮಟಾ: ಬಿಜೆಪಿ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ನೀಡಿದ್ದ ಎಲ್ಲಾ ಆಶ್ವಾಸನೆಗಳನ್ನು ಈಡೆರಿಸುತ್ತಾ ಬಂದಿದ್ದು, ಏಕಪೌರತ್ವ ಕಾಯ್ದೆಯನ್ನೂ ಸದ್ಯವೇ ಜಾರಿಗೆ ತರಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಹೇಳಿದರು.
ಅವರು ಕುಮಟಾ ಬಿಜೆಪಿ ಕಚೇರಿಯಲ್ಲಿ ಮಂಡಲದಿAದ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ರಾಜ್ಯ ಮತ್ತು ಕೇಂದ್ರದಲ್ಲಿ ನಿರೀಕ್ಷೆಗೂ ಮೀರಿ ಆಡಳಿತ ನಡೆಸುತ್ತಿದ್ದೇವೆ. ಅಪೇಕ್ಷೆಯಂತೆ ಕಾರ್ಯ ನಡೆಯುತ್ತಿಲ್ಲವಾದರೂ ೧೯೮೨ರಿಂದ ರಾಮಮಂದಿರ, ಆರ್ಟಿಕಲ್ ೩೭೦ ಸೇರಿದಂತೆ ಅನೇಕ ಬದಲಾವಣೆಗಳನ್ನು ತಂದಿದ್ದು ನಮ್ಮ ಪಕ್ಷದ ಸಾಧನೆ ಎನ್ನಬಹುದು. ನಾವೆಲ್ಲರೂ ಸ್ವಾಭಿಮಾನದಿಂದ ಬಿಜೆಪಿಗರು ಎನ್ನಬಹುದಾಗಿದ್ದು, ಇದು ವ್ಯಕ್ತಿಯಾಧಾರಿತ ಸಂಘಟನೆಯಲ್ಲ ಎಂದು ಅಭಿಪ್ರಾಯಪಟ್ಟರು.
ಅನೇಕ ರಾಜ್ಯಗಳಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದ್ದು, ಪಕ್ಷ ಬಲವರ್ಧನೆಗೆ ಸ್ಥಳೀಯ ಮಟ್ಟದಲ್ಲಿ ಸಂಘಟನೆ ಬೆಳೆಯಬೇಕು. ಹಾಗಾಗಿ ಪ್ರತಿ ಬೂತ್ನಲ್ಲೂ ನಾವು ಪಕ್ಷದ ಕಾರ್ಯಚಟುವಟಿಕೆಗಳ ಬಗ್ಗೆ ಜನರಲ್ಲಿ ಮನವರಿಕೆ ಮಾಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಶಿವಮೊಗ್ಗದ ಸಹ ಪ್ರಭಾರಿ ಎನ್.ಎಸ್.ಹೆಗಡೆ, ಶಾಸಕ ದಿನಕರ ಶೆಟ್ಟಿ, ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಮಂಡಲಾಧ್ಯಕ್ಷ ಹೆಮಂತಕುಮಾರ ಗಾಂವಕರ ಇದ್ದರು.
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ