May 17, 2024

Bhavana Tv

Its Your Channel

ಕುಮಟಾ ತಾಲೂಕಿನ ಹೊಲನಗದ್ದೆ ಶಾಲೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ ಭೇಟಿ

ಕುಮಟಾ ತಾಲೂಕಿನ ಹೊಲನಗದ್ದೆ ಶಾಲೆಗೆ ಭೇಟಿ ನೀಡಿದ ಸಚಿವರು ವಿಜ್ಞಾನ ಪ್ರಯೋಗಾಲಯ, ವಾಚನಾಲಯ, ಇಂಗ್ಲೀಷ್ ಕ್ಲಾಸ್ ರೂಂ, ಡಿಜಿಟಲ್ ಕ್ಲಾಸ್ ರೂಮ್, ನವೀಕೃತ ಕೊಠಡಿ, ವರಾಂಡವನ್ನು ಸಚಿವರು ಉದ್ಘಾಟಿಸಿದರು.
ಪ್ರಭಾರ ಮುಖ್ಯ ಶಿಕ್ಷಕ ರವೀಂದ್ರ ಭಟ್ಟ ಸೂರಿ ಅವರು ದಾನಿಗಳ ನೆರವಿನಿಂದ ಹಾಗೂ ಶಾಸಕ ದಿನಕರ ಶೆಟ್ಟಿ ಅವರ ಸಹಕಾರದಿಂದ ಗುಣಮಟ್ಟದ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲು ಸಾಧ್ಯವಾಗಿದೆ ಎಂದು ಸಚಿವ ಬಿ.ಸಿ.ನಾಗೇಶ ಅವರಿಗೆ ಮಾಹಿತಿ ನೀಡಿದರು. ಶಾಲೆಯಲ್ಲಿನ ಕಲಿಕೆಯ ಶೈಲಿ, ಮಕ್ಕಳ ಸಂಖ್ಯೆ, ಕೊಠಡಿಗಳು, ಶಿಕ್ಷಕರ ಸ್ಪಂದನೆ ಬಗ್ಗೆ ಸಚಿವರು ಮಾಹಿತಿ ಪಡೆದರು. ಶಾಸಕ ದಿನಕರ ಶೆಟ್ಟಿ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಸಹ ಶಿಕ್ಷಕರು ಇದ್ದರು.

error: