May 11, 2024

Bhavana Tv

Its Your Channel

ರತ್ನಾಕರ ನಾಯ್ಕರವರು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

ಕುಮಟಾ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಮತ್ತು ಮಾಜಿ ಎಂಎಲ್‌ಸಿ ಎಂ ಡಿ ಲಕ್ಷ್ಮೀನಾರಾಯಣ ಅವರು ರತ್ನಾಕರ ನಾಯ್ಕ ಅವರನ್ನು ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಳಿಸಿದ್ದಾರೆ

ಕಾಂಗ್ರೆಸ್ ಜನಪರ ನಾಯಕ ಮತ್ತು ಹೆಗಡೆ ಜಿಪಂ ನಿಕಟಪೂರ್ವ ಸದಸ್ಯ ರತ್ನಾಕರ ನಾಯ್ಕ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ ಎಂದಿನAತೆ ಪಕ್ಷ ಕಾರ್ಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಸಬಲೀಕರಣ , ಸಂಘಟನೆ , ಬಲ ವರ್ಧನೆ ಕಾರ್ಯದಲ್ಲಿ ಸಮರ್ಪಣಾ ಭಾವದಿಂದ ತೊಡಗಿಕೊಳ್ಳುವಂತೆ ಸೂಚಿಸಿದ್ದಾರೆ . ಈ ನಿಟ್ಟಿನಲ್ಲಿ ಪಕ್ಷ ಸಂಘಟನೆ ಕಾರ್ಯದಲ್ಲಿ ಹೆಚ್ಚಿನ ಯಶಸ್ಸು ಸಿಗಲೆಂದು ಹಾರೈಸಿದ್ದಾರೆ . ಕಾಂಗ್ರೆಸ್‌ನ ರಾಜ್ಯ ಸಮಿತಿಯಲ್ಲಿ ಗೌರವಯುತ ಸ್ಥಾನ ನೀಡಿದ ಪಕ್ಷದ ವರೀಷ್ಠರಿಗೆಲ್ಲರಿಗೂ ರತ್ನಾಕರ ನಾಯ್ಕ ಅವರು ಕೃತಜ್ಞತೆ ಸಲ್ಲಿಸಿದ್ದಾರೆ

error: