ಕುಮಟಾ ತಾಲೂಕಿನ ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಎ.ಬಿ.ವಿ.ಪಿ ಕಾರ್ಯಕರ್ತರು ಪಟ್ಟಣದ ಮಣಕಿ ಮೈದಾನದಿಂದ ತಹಸೀಲ್ದಾರ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು .
ಕುಮಟಾ ಮಣಕಿ ಮೈದಾನದಲ್ಲಿ ಜಮಾಯಿಸಿದ ಎ.ಬಿ.ವಿ.ಪಿ ಕಾರ್ಯಕರ್ತರು ಕುಮಟಾ ತಾಲೂಕಿನ ಗ್ರಾಮೀಣ ಭಾಗಗಳಿಗೆ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿದರು . ಅಲ್ಲಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಹಸೀಲ್ದಾರ್ ಕಚೇರಿಯಲ್ಲಿ ಸಮಾವೇಶಗೊಂಡಿತು . ನಂತರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು . ಕೊರೊನಾ ಸೋಂಕು ಇಳಿಮುಖವಾಗಿದ್ದರೂ ಸಾರಿಗೆ ಇಲಾಖೆ ಮೊದಲಿನ ರೀತಿಯಲ್ಲಿ ಗ್ರಾಮೀಣ ಭಾಗಗಳಿಗೆ ಬಸ್ ಸೌಲಭ್ಯ ಆರಂಭಿಸಿಲ್ಲ . ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ . ಬಸ್ ಸೌಲಭ್ಯ ಒದಗಿಸುವಂತೆ ಸಾಕಷ್ಟು ಬಾರಿ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ . ಈ ಬಗ್ಗೆ ಪರಿಶೀಲಿಸಿ , ಸೂಕ್ತ ಕ್ರಮ ವಹಿಸಬೇಕೆಂದು ಆಗ್ರಹಿಸಲಾಗಿದೆ . ಒಂದು ವಾರದ ಒಳಗಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಿ , ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು . ಇಲ್ಲವಾದಲ್ಲಿ ಎ.ಬಿ.ವಿ.ಪಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಸಲಾಗಿದೆ .
ತಹಸೀಲ್ದಾರ ಅನುಪಸ್ಥಿತಿಯಲ್ಲಿ ಕಂದಾಯ ಅಧಿಕಾರಿ ಪುಷ್ಪಾ ನಾಯ್ಕ ಮನವಿ ಸ್ವೀಕರಿಸಿ , ತಹಸೀಲ್ದಾರ ಗಮನಕ್ಕೆ ತಂದು , ಸಾರಿಗೆ ಇಲಾಖಾ ಅಧಿಕಾರಿಗಳ ಜತೆ ಮಾತನಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿದರು . ಪ್ರತಿಭಟನೆಯಲ್ಲಿ ಎ.ಬಿ.ವಿ.ಪಿ ವಿಭಾಗ ಸಂಚಾಲಕ ಸಂದೇಶ ನಾಯ್ಕ , ಜಿಲ್ಲಾ ಸಂಚಾಲಕ ಗಜೇಂದ್ರ ಕುಮಟಾ , ಸಹ ಸಂಚಾಲಕ ವಿರೇಂದ್ರ ಗುನಗಾ , ಕಾರ್ಯಕರ್ತರಾದ ಸುಜತ್ , ಪ್ರಸನ್ನ ಭಟ್ಟ , ಭರತ ನಾಯ್ಕ , ಧನ್ಯಾ , ಅನನ್ಯಾ , ಭೂಮಿಕಾ , ಮಾನಸಾ ನಾಯ್ಕ ಸೇರಿದಂತೆ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು .
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ