ಕುಮಟಾ: ಪಟ್ಟಣದ ಗುಜರಗಲ್ಲಿಯ ಗೋಪಾಲ ಕೃಷ್ಣ ಗಂಗೊಳ್ಳಿ ಅವರ ಮಾಲೀಕತ್ವದ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ತಗಲಿದೆ.ಈ ಬಗ್ಗೆ ಮಾಹಿತಿ ಪಡೆದ ಅಗ್ನಿ ಶಾಮಕ ದಳದ ಸಿಬ್ಬಂದಿಯು ತಕ್ಷಣ ಸ್ಥಳಕ್ಕೆ ಧಾವಿಸಿ, ಮನೆಗೆ ಬಿದ್ದ ಬೆಂಕಿಯನ್ನು ನಂದಿಸುವ ಮೂಲಕ ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.
ಬೆಂಕಿ ಅವಘಡದಿಂದ ಆತಂಕಗೊAಡ ಕುಟುಂಬಸ್ಥರು ಮನೆಯಿಂದ ಹೊರಬಂದಿದ್ದರಿAದ ಯಾರಿಗೂ ಅಪಾಯವಾಗಿಲ್ಲ. ಆದರೆ ಬೆಂಕಿ ಅವಘಡದಿಂದ ಮನೆಯೊಳಗಿದ್ದ ಫ್ರಿಜ್, ಟಿವಿ ಸೇರಿದಂತೆ ಇನ್ನಿತರೆ ಇಲೆಕ್ಟ್ರಿಕಲ್ ಮತ್ತು ಗೃಹ ಬಳಕೆ ಸಾಮಗ್ರಿಗಳು ಸುಟ್ಟು ಕರಕಲಾಗಿವೆ.
ಸುಮಾರು ಲಕ್ಷ ರೂ. ಮೌಲ್ಯದ ಗೃಹ ಬಳಕೆ ಸಾಮಗ್ರಿಗಳು ಸೇರಿದಂತೆ ಕೆಲ ಮಹತ್ವದ ದಾಖಲೆಗಳು ಕೂಡ ಸುಟ್ಟು ಭಸ್ಮವಾಗಿದೆ ಎನ್ನಲಾಗಿದೆ.
ವರದಿ: ನಟರಾಜ ಗದ್ದೆಮನೆ ಕುಮಟಾ
More Stories
ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಶಾಲೆಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ: ಶೇ. 94.23
ಮೋದಿ ಒಬ್ಬ ಒಳ್ಳೆ ನಾಟಕಕಾರ, ಇವೆಂಟ್ ಮ್ಯಾನೇಜರ್: ಸಿದ್ದರಾಮಯ್ಯ
ಜೆಡಿಎಸ್ ತೊರೆದು ‘ಕೈ’ ಹಿಡಿದ ಶಾಬಂದ್ರಿ